ಧರ್ಮಸ್ಥಳಕ್ಕೆ ಹೊರಟಿದ್ದ ಸಚಿವ ಜಮೀರ್ ಅಹಮ್ಮದ್ ಗೆ ಕೈ ಕೊಟ್ಟ ಹೆಲಿಕಾಪ್ಟರ್

ಸೋಮವಾರ, 25 ಜೂನ್ 2018 (11:35 IST)
ಬೆಂಗಳೂರು: ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರ ಶಾಂತಿವನದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಗೆ ಕಾಂಗ್ರೆಸ್ ನಾಯಕರ ದಂಡು ದಿನೇ ದಿನೇ ಬರುತ್ತಿದೆ.

ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸಲು ಸಿದ್ದರಾಮಯ್ಯ ಭೇಟಿಗಾಗಿ ನಿನ್ನೆ ಕಾಂಗ್ರೆಸ್ ನ ಹಲವಾರು ನಾಯಕರು ಇಲ್ಲಿಗೆ ಬಂದಿದ್ದರು. ಇಂದು ಸಚಿವ ಜಮೀರ್ ಅಹಮ್ಮದ್ ಖಾನ್ ಆಗಮಿಸಲಿದ್ದರು.

ಆದರೆ ಸಕಲೇಶಪುರದವರೆಗೆ ಹೆಲಿಕಾಪ್ಟರ್ ನಲ್ಲಿ ಬಂದ ಅವರಿಗೆ ನಂತರ ಹವಾಮಾನ ಕೈಕೊಟ್ಟಿದ್ದರಿಂದ ಮುಂದುವರಿಯಲಾಗಲಿಲ್ಲ. ಈ ಕಾರಣಕ್ಕೆ ಮರಳಿ ಬೆಂಗಳೂರಿನತ್ತ ಪ್ರಯಾಣಿಸಿದ್ದಾರೆ. ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಬಗ್ಗೆ ಉಂಟಾಗಿರುವ ವಿವಾದದ ಬಗ್ಗೆ ಸಿದ್ದರಾಮಯ್ಯ ಬಳಿ ಜಮೀರ್ ಚರ್ಚೆ ನಡೆಸಲಿದ್ದರು ಎನ್ನಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ