ಗಗನಸಖಿಯನ್ನು ತಳ್ಳಿಕೊಂದ ಪ್ರಿಯಕರ

ಬುಧವಾರ, 15 ಮಾರ್ಚ್ 2023 (17:13 IST)
ಬೆಂಗಳೂರು ನಗರದ ಕೋರಮಂಗಲದಲ್ಲಿ ಅಪಾರ್ಟ್ಮೆಂಟ್​ವೊಂದರ ಮೇಲಿಂದ ಬಿದ್ದು ಗಗನಸಖಿ ಅರ್ಚನಾ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಗಗನಸಖಿ ಅರ್ಚನಾ ಆತ್ಮಹತ್ಯೆ ಅಲ್ಲ ಕೊಲೆ ಎನ್ನುವುದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಅರ್ಚನಾಳನ್ನ ಆಕೆಯ ಬಾಯ್​ ಫ್ರೆಂಡ್ ಆದೇಶ್​ ಬಿಲ್ಡಿಂಗ್ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ ಎಂಬ ಅಂಶ ತನಿಖೆ ವೇಳೆ ಬಯಲಾಗಿದೆ.. ಈ ಹಿನ್ನೆಲೆಯಲ್ಲಿ ಕೋರಮಂಗಲ ಪೊಲೀಸರು ಅರ್ಚನಾಳ ಪ್ರಿಯಕರ ಆದೇಶ್​ ವಿರುದ್ಧ IPC 302 ಅಡಿಯಲ್ಲಿ FIR ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಹಿಮಾಚಲ ಮೂಲದ ಅರ್ಚನಾ ಹಾಗೂ ಕೇರಳ ಮೂಲದ ಆದೇಶ್​ ಡೇಟಿಂಗ್​ ಅ್ಯಪ್​ನಲ್ಲಿ ಪರಿಚಿತರಾಗಿದ್ದು, ಬಳಿಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಅರ್ಚನಾ ದುಬೈನ ಏರ್​ಲೈನ್ಸ್​​ನಲ್ಲಿ ಗಗನಸಖೆಯಾಗಿದ್ದರೆ, ಆದೇಶ್​ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಆದೇಶನನ್ನು ನೋಡಲು ಅರ್ಚನಾ ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದಳು. ಆದ್ರೆ, ಮಾರ್ಚ್​ 11ರಂದು ಅರ್ಚನಾ ಆದೇಶ ತಂಗಿದ್ದ ಅಪಾರ್ಟ್ಮೆಂಟ್​ ಮೇಲಿಂದ ಬಿದ್ದು ಮೃತಪಟ್ಟಿದ್ದಳು. ಬಳಿಕ ಆದೇಶ್​, ನಶೆಯಲ್ಲಿ ಬಿಲ್ಡಿಂಗ್​​​​ ಮೇಲಿಂದ ಬಿದ್ದು ಮೃತಪಟ್ಟಿದ್ದಾಳೆ ಎಂದು ಆಕೆಯ ತಂದೆಗೆ ಕರೆ ಮಾಡಿ ಹೇಳಿದ್ದ. ಅಲ್ಲದೇ ಪೊಲೀಸರಿಗೂ ಇದೇ ಹೇಳಿದ್ದ. ಆದ್ರೆ, ಈ ಸಾವಿನ ಬಗ್ಗೆ ಕುಟುಂಬಸ್ಥರಿಗೆ ಅನುಮಾನ ಬಂದಿದ್ದು, ಇದು ಆಕಸ್ಮಿಕವಾಗಿ ಬಿದ್ದಿರುವುದಲ್ಲ. ಆದೇಶ್​ ಆಕೆಯನ್ನು ಮೇಲಿಂದ ತಳ್ಳಿದ್ದಾನೆ ಎಂದು ದೂರು ನೀಡಿದ್ದರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ