ತಡವಾಗಿದ್ದಕ್ಕೆ ರಾಜ್ಯಪಾಲರ ಬಿಟ್ಟುಹೋದ ವಿಮಾನ : ಗೆಹ್ಲೋಟ್ ಗರಂ

ಶುಕ್ರವಾರ, 28 ಜುಲೈ 2023 (10:26 IST)
ಬೆಂಗಳೂರು : ಹೈದರಾಬಾದ್ಗೆ ತೆರಳಬೇಕಿದ್ದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು 10 ನಿಮಿಷ ತಡವಾಗಿ ಏರ್ಪೋರ್ಟ್ಗೆ ಆಗಮಿಸಿದ್ದಕ್ಕೆ, ಅವರನ್ನೇ ವಿಮಾನ ಬಿಟ್ಟು ಹೋಗಿರುವ ಘಟನೆ ನಡೆದಿದೆ.
 
ಗುರುವಾರ ಮಧ್ಯಾಹ್ನ ಬೆಂಗಳೂರು ಏರ್ಪೋರ್ಟ್ನಲ್ಲಿ ಘಟನೆ ನಡೆದಿದ್ದು, ರಾಜ್ಯಪಾಲರು ಗರಂ ಆಗಿದ್ದಾರೆ. ನಾನು ರಾಜ್ಯದ ಪ್ರಥಮ ಪ್ರಜೆ. ನನಗೆ ಅಗೌರವ ಉಂಟಾಗಿದೆ. ನನ್ನ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ. 10 ನಿಮಿಷ ತಡವಾದರೆ, ಕಾಯಬೇಕಿತ್ತು. ಹಾಗಂಥ ನನ್ನ ಬಿಟ್ಟು ಹೋಗ್ತಾರಾ ಎಂದು ಪ್ರಶ್ನಿಸಿದ್ದಾರೆ. 

ಗೆಹ್ಲೋಟ್ ಅವರು ಕಾರ್ಯಕ್ರಮದ ನಿಮಿತ್ತ ಬೆಂಗಳೂರಿನಿಂದ ಹೈದರಾಬಾದ್ಗೆ ಹೊರಟ್ಟಿದ್ದರು. ಮಧ್ಯಾಹ್ನ 2 ಗಂಟೆಗೆ ಏರ್ಏಶಿಯಾ ವಿಮಾನದ ಮೂಲಕ ಹೋಗಬೇಕಿತ್ತು. ಆದರೆ 15 ನಿಮಿಷ ತಡವಾಗಿ ಏರ್ಪೋರ್ಟ್ ತಲುಪಿದ್ದಾರೆ.

ಅಷ್ಟರಲ್ಲಿ ವಿಮಾನ ರಾಜ್ಯಪಾಲರ ಬಿಟ್ಟು ಹಾರಾಟ ನಡೆಸಿತ್ತು. ಇದರಿಂದ ಕೋಪಗೊಂಡ ರಾಜ್ಯಪಾಲರು ಅಧಿಕಾರಗಳ ಕರೆಸಿ ಮಾತನಾಡಿದ್ದಾರೆ. ಅಲ್ಲದೇ ಶಿಷ್ಟಾಚಾರ ಉಲ್ಲಂಘನೆ ಮಾಡಿದ ವಿಮಾನ ಕಂಪನಿಯ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ