ನಾಳೆ ರೈಲು ಮಾರ್ಗದಲ್ಲಿ ಸಂಪೂರ್ಣ ವ್ಯತ್ಯಯ..!

ಗುರುವಾರ, 28 ಸೆಪ್ಟಂಬರ್ 2023 (20:00 IST)
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಿದ ಹಿನ್ನಲೆಯಲ್ಲಿ ರೈಲು ಮಾರ್ಗದಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಮೈಸೂರಿನಿಂದ ತೆರಳುವ ರೈಲು ತಡೆಯಲು ರೈತರು ಪ್ಲಾನ್ ಮಾಡಿಕೊಂಡಿದ್ದಾರೆ. ಹೀಗಾಗಿ ಮೈಸೂರಿನಿಂದ ಬೆಂಗಳೂರಿಗೆ ತೆರಳುವ ರೈಲುಗಳ ಪ್ರಯಾಣದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಮೈಸೂರು- ಬೆಂಗಳೂರು ಮಾರ್ಗದ ರೈಲು ಸಂಚಾರಕ್ಕೆ ಅಡ್ಡಿಪಡಿಸಲು ರೈತರು ನಿರ್ಧರಿಸಿದ್ದಾರೆ. ಹೀಗಾಗಿ ಬೆಂಗಳೂರಿನಿಂದ ಮೈಸೂರಿಗೆ ಬರುವ ರೈಲಿನ ಸಮಯ ವ್ಯತ್ಯಯ ಉಂಟಾಗಲಿದೆ.ಹಾಗಾಗಿ ನಾಳಿನ ಕರ್ನಾಟಕ ಬಂದ್‌ಗೆ ಕರ್ನಾಟಕ ರಾಜ್ಯ ರೈತ ಸಂಘ ಸಂಪೂರ್ಣ ಬೆಂಬಲ ಸೂಚಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ