ಶಾಲೆ ಬಂದ್ ಮಾಡುವ ಬಗ್ಗೆ ಯಾವುದೇ ಮಾಹಿತಿಯಿಲ್ಲ: ನಾಗೇಶ್

ಭಾನುವಾರ, 25 ಸೆಪ್ಟಂಬರ್ 2022 (13:14 IST)
ಬೆಂಗಳೂರು : ಹೈಕೋರ್ಟ್ ಆದೇಶ ಮತ್ತು ಐಎಂಎ ನಡೆಸುತ್ತಿದ್ದ ಶಾಲೆ ಬಂದ್ ಮಾಡುವ ಬಗ್ಗೆ ಯಾವುದೇ ಮಾಹಿತಿ ನಮಗೆ ಬಂದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕೂಡಲೇ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಬಗ್ಗೆ ತಿಳಿಸಲು ಸೂಚನೆ ನೀಡುತ್ತೇನೆ ಎಂದು ಭರವಸೆ ನೀಡಿದರು.

ಅಧಿಕಾರಿಗಳಿಂದ ಘಟನೆಯ ಕುರಿತು ಕೂಡಲೇ ಸಂಪೂರ್ಣ ವರದಿ ಪಡೆಯುತ್ತೇನೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಮಸ್ಯೆ ಆಗದಂತೆ ನಾವು ಕ್ರಮವಹಿಸುತ್ತೇವೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ