ಸಂಸದ ಪ್ರತಾಪ್ ಸಿಂಹ ಕಿತಾಪತಿ: ಮಹಿಳಾ ಪೊಲೀಸ್ ಅಧಿಕಾರಿ ಪ್ರಾಣಾಪಾಯದಿಂದ ಪಾರು

ಭಾನುವಾರ, 3 ಡಿಸೆಂಬರ್ 2017 (15:12 IST)
ಹನುಮ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಬಿಳಿಕೆರೆ ಗ್ರಾಮಕ್ಕೆ ಆಗಮಿಸುತ್ತಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಪೊಲೀಸರ ಬ್ಯಾರಿಕೇಡ್ ಮೇಲೆ ಕಾರು ಹತ್ತಿಸಿದ ಘಟನೆ ನಡೆದಿದೆ.
ನಿಷೇಧದ ಮಧ್ಯೆಯೂ ಹನುಮಾನ ಮೆರವಣಿಗೆ ನಡೆಸಿಯೇ ತಿರುತ್ತೇವೆ ಎನ್ನುವ ಹಟದಿಂದ ಪ್ರತಾಪ್ ಸಿಂಹ, ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬ್ಯಾರಿಕೇಡ್ ಮೇಲೆ ಕಾರು ಹತ್ತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಂಸದ ಪ್ರತಾಪ್ ಸಿಂಹ ಬ್ಯಾರಿಕೇಡ್ ಮೇಲೆ ಕಾರು ಹತ್ತಿಸುತ್ತಿರುವ ಸಂದರ್ಭದಲ್ಲಿ ಅಲ್ಲಿಯೇ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿ ಸ್ವಲ್ಪದರಲ್ಲಿಯೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಿದ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸುವ ಚಿಂತನೆಯಲ್ಲಿ ತೊಡಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ