ಮೋದಿ ದವಡೆಗೆ ಹೊಡೆಯಿರಿ ಎಂದ ಜೆಡಿಎಸ್ ಶಾಸಕನ ವಿರುದ್ಧ ಕೇಸ್ ದಾಖಲು

ಭಾನುವಾರ, 31 ಮಾರ್ಚ್ 2019 (10:49 IST)
ಅರಸೀಕೆರೆ : ಪ್ರಧಾನಿ ಮೋದಿಯ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರ ವಿರುದ್ಧ ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಅರಸೀಕೆರೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಶಿವಲಿಂಗೇಗೌಡ, ಮೋದಿಯವರನ್ನು ಟೀಕಿಸಿ ಭಾಷಣ ಮಾಡುವಾಗ, ಮೋದಿ ದವಡೆಗೆ ಹೊಡೆಯಿರಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಭಾರಿ ಸುದ್ದಿಯಾಗಿತ್ತು.


ಈ ರೀತಿ ಹೇಳಿಕೆ ನೀಡಿರುವುದಕ್ಕೆ ಶಾಸಕ ಶಿವಲಿಂಗೇಗೌಡ ಅವರ ವಿರುದ್ಧ ಅರಸೀಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಇದೀಗ ಶಾಸಕ ಶಿವಲಿಂಗೇಗೌಡ ತಾವು ಹಾಗೆ ಹೇಳಿಲ್ಲ. ಬಳಸಿದ ಪದ ತಪ್ಪಾಗಿರಬಹುದು ಎಂದು ಶಿವಲಿಂಗೇಗೌಡ ಸಮಜಾಯಿಷಿ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ