ಆಮ್ ಆದ್ಮಿ ಪಕ್ಷದ ನೀತಿಗಳು ಮಾವೋವಾದಿಗಳ ನೀತಿಗಳಂತೆ: ಗಡ್ಕರಿ ಕಿಡಿ

ಬುಧವಾರ, 18 ಡಿಸೆಂಬರ್ 2013 (15:16 IST)
PTI
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮಾವೋಗಳಂತೆ ರಾಜಕೀಯ ಚಿಂತನೆ ಹೊಂದಿದೆ. ಪ್ರಜಾಪ್ರಭುತ್ವವನ್ನು ಬೇರುಮಟ್ಟದಿಂದ ಕಟಟ್ುವ ನೆಪದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹದಗೆಡಿಸುತ್ತಿದೆ ಎಂದು ಬಿಜೆಪಿ ಮುಖಂಡ ನಿತಿನ್ ಗಡ್ಕರಿ ಆರೋಪಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ದೆಹಲಿಯಲ್ಲಿ ಸರಕಾರ ರಚಿಸುವ ನೆಪದಲ್ಲಿ ನಡೆಯುತ್ತಿರುವ ಆಪ್ ಪಕ್ಷದ ನಾಟಕಗಳು ಮಾವೋವಾದಿಗಳ ನಾಟಕದಂತೆ ಕಂಡುಬರುತ್ತಿದೆ ಎಂದು ಕಿಡಿಕಾರಿದ್ದಾರೆ.

ನಾಗ್ಪುರ್‌ನಿಂದ ಚುನಾವಣೆ ಕಣಕ್ಕೆ ಇಳಿಯಲು ಬಯಸಿದ್ದೀರಾ. ನಿಮ್ಮ ಪ್ರತಿಸ್ಪರ್ಧಿಯಾಗಿ ಆಪ್ ಪಕ್ಷದ ಸದಸ್ಯೆ ಅಂಜಲಿ ದಮಾನಿಯಾ ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದ್ರೂ ಚುನಾವಣೆ ಕಣಕ್ಕೆ ಇಳಿಯಬಹುದು ಎಂದು ತಿರುಗೇಟು ನೀಡಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಚುನಾವಣೆಯಲ್ಲಿ ಬಹುಮತಗಳಿಸಿ ಅಧಿಕಾರದ ಗದ್ದುಗೆಗೆ ಏರಲಿದೆ. ಕಾಂಗ್ರೆಸ್ ಪಕ್ಷ ಹಣದುಬ್ಬರ ಮತ್ತು ಭ್ರಷ್ಟಾಚಾರದಲ್ಲಿ ದಾಖಲೆ ರೂಪಿಸಿದೆ. ಅಭಿವೃದ್ಧಿಯಲ್ಲಿ ಮಹಾರಾಷ್ಟ್ರ ರಾಜ್ಯ ಮಧ್ಯಪ್ರದೇಶ ಮತ್ತು ಗುಜರಾತ್‌ಗಿಂತ ಹಿಂದಿದೆ ಎಂದು ಬಿಜೆಪಿ ಮುಖಂಡ ನಿತಿನ್ ಗಡ್ಕರಿ ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ