ಆಮ್ ಆದ್ಮಿ ಪಕ್ಷವನ್ನು ಲಘುವಾಗಿ ಪರಿಗಣಿಸಬೇಡಿ: ಬಿಜೆಪಿಗೆ ಆರೆಸ್ಸೆಸ್‌ ಎಚ್ಚರಿಕೆಯ ಸಂದೇಶ

ಶುಕ್ರವಾರ, 10 ಜನವರಿ 2014 (14:56 IST)
PTI
ದೆಹಲಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಆಮ್ ಆದ್ಮಿ ಪಕ್ಷವನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಆರೆಸ್ಸೆಸ್ ಬಿಜೆಪಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಹೈದ್ರಾಬಾದ್‌ನಲ್ಲಿ ನಡೆದ ಮೂರು ದಿನಗಳ ಕಾರ್ಯಕಾರಿ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಣತಂತ್ರ ರೂಪಿಸುವ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ್ ಸಂಘದ ಉನ್ನತ ನಾಯಕರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಹೇಳಿದ್ದಾರೆ.

ದೇಶಾದ್ಯಂತ ಆಮ್ ಆದ್ಮಿ ಪಕ್ಷದ ಬಗ್ಗೆ ಜನತೆಯಲ್ಲಿ ಒಲವು ಹೆಚ್ಚುತ್ತಿರುವುದರ ಬಗ್ಗೆ ಆರೆಸ್ಸೆಸ್ ಕಳವಳ ವ್ಯಕ್ತಪಡಿಸಿದೆ. ಪಟ್ಟಣಗಳಲ್ಲೂ ಆಮ್ ಆದ್ಮಿ ಪಕ್ಷದ ಪ್ರಭಾವ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದೆ

ಆಮ್ ಆದ್ಮಿ ಪಕ್ಷದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಆರೆಸ್ಸೆಸ್ ವಕ್ತಾರ ರಾಮ್ ಮಾಧವ್ ಸ್ಪಷ್ಟಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ