ಕಾಂಗ್ರೆಸ್ ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸಿ: ಚುನಾವಣೆ ಆಯೋಗಕ್ಕೆ ಬಿಜೆಪಿ ಒತ್ತಾಯ

ಗುರುವಾರ, 21 ನವೆಂಬರ್ 2013 (13:03 IST)
PTI
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ನಿರಂತರವಾಗಿ ನೀತಿ ಸಂಹಿತೆ ಉಲ್ಲಂಘಿಸುತ್ತಿರುವುದರಿಂದ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸಬೇಕು ಎಂದು ಬಿಜೆಪಿ ನಿಯೋಗ ಚುನಾವಣೆ ಆಯೋಗಕ್ಕೆ ಒತ್ತಾಯಿಸಿದೆ

ಚತ್ತೀಸ್‌ಗಢ್‌ ರಾಜ್ಯದ ಬಿಜೆಪಿ ಸರಕಾರದಲ್ಲಿ ಕಳ್ಳರು ಮತ್ತು ಲೂಟಿಕೋರರಿದ್ದಾರೆ ಎಂದು ನವೆಂಬರ್ 16 ರಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ ಎಂದು ಬಿಜೆಪಿ ನಾಯಕ ಮುಕ್ತಾರ್ ಅಬ್ಬಾಸ್ ನಖ್ವಿ ನೇತೃತ್ವದ ನಿಯೋಗ ಚುನಾವಣೆ ಆಯುಕ್ತರನ್ನು ಭೇಟಿ ದೂರು ಸಲ್ಲಿಸಿದೆ.

ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿರುವುದರಿಂದ ಬಿಜೆಪಿ ಪಕ್ಷದ ಬಗ್ಗೆ ಜನತೆಯಲ್ಲಿ ಅಸಮಧಾನ ಮೂಡುತ್ತಿದೆ ಎಂದು ಬಿಜೆಪಿ ಮುಖಂಡ ನಖ್ವಿ ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ