ನರೇಂದ್ರ ಮೋದಿ ಅಲೆಯಾದ್ರೆ ಸೋನಿಯಾ ಗಾಂಧಿ ಸುನಾಮಿಯಂತೆ: ಕಾಂಗ್ರೆಸ್

ಶನಿವಾರ, 22 ಮಾರ್ಚ್ 2014 (16:59 IST)
PR
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅಲೆಯಾದ್ರೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಸುನಾಮಿಯಂತೆ ಎಂದು ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ವಿಶ್ವಜಿತ್ ಕದಮ್ ಹೇಳಿದ್ದಾರೆ.

ಕಾಮನ್‌ವೆಲ್ತ್ ಹಗರಣದಲ್ಲಿ ಆರೋಪಿಯಾಗಿದ್ದ ಕಾಂಗ್ರೆಸ್ ಮುಖಂಡ ಸುರೇಶ್ ಕಲ್ಮಾಡಿ ಬದಲಿಗೆ ವಿಶ್ವಜಿತ್ ಕದಮ್‌ಗೆ ಕಾಂಗ್ರೆಸ್ ಟಿಕೆಟ್ ದೊರೆತಿದೆ.

ಪುಣೆ ಲೋಕಸಭೆ ಕ್ಷೇತ್ರದಿಂದ ಯುವನಾಯಕ ವಿಶ್ವಜಿತ್ ಕದಮ್ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆತಿರುವುದರಿಂದ ಕಾಂಗ್ರೆಸ್ ಮುಖಂಡರು ಸಂತಸ ವ್ಯಕ್ತಪಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಪುಣೆಯಲ್ಲಿ ನಡೆದ ಪ್ರತಿಯೊಂದು ಚುನಾವಣೆಯಲ್ಲಿ ತಮ್ಮದೇ ಪ್ರಭಾವದ ಮೂಲಕ ನಿಯಂತ್ರಿಸುತ್ತಿದ್ದ ಮಾಜಿ ಸಚಿವ ಕಲ್ಮಾಡಿ ಭ್ರಷ್ಟಾಚಾರದ ಆರೋಪಗಳಿಂದ ತತ್ತರಿಸಿದ್ದಾರೆ. ಇದೀಗ ಮಹಾರಾಷ್ಟ್ರದ ಸಚಿವರೊಬ್ಬರ ಪುತ್ರರಾದ 33 ವರ್ಷ ವಯಸ್ಸಿನ ಯುವನಾಯಕ ವಿಶ್ವಜಿತ್ ಕದಮ್ ಕೂಡಾ ಕಲ್ಮಾಡಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅಲೆಯಾದ್ರೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಸುನಾಮಿಯಂತೆ. ಕೆಲವರು ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ವಿಶ್ವಜಿತ್ ಕದಮ್ ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ