ಪ್ರಧಾನಿ ಮನಮೋಹನ್ ರಾಜೀನಾಮೆ ಕೇವಲ ವದಂತಿ: ಕಾಂಗ್ರೆಸ್

ಮಂಗಳವಾರ, 31 ಡಿಸೆಂಬರ್ 2013 (14:11 IST)
PR
PR
ನವದೆಹಲಿ: ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಜನವರಿ 3ರಂದು ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ ಮತ್ತು ರಾಹುಲ್ ಪ್ರಧಾನಿ ಪಟ್ಟವನ್ನು ಅಲಂಕರಿಸಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವದಂತಿಯನ್ನು ಹಬ್ಬಿಸಿದ್ದವು.ಪ್ರಧಾನಮಂತ್ರಿ ಕಾರ್ಯಾಲಯ ಈ ವದಂತಿಯನ್ನು ತಳ್ಳಿಹಾಕಿದೆ. ಮುಂದಿನ ಚುನಾವಣೆಯಲ್ಲಿ ತಾವು ಪ್ರಧಾನಿ ಅಭ್ಯರ್ಥಿಯಾಗೋದಿಲ್ಲ, ರಾಹುಲ್ ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡುವುದಕ್ಕಾಗಿ ಪ್ರಧಾನಿ ಈ ಸುದ್ದಿಗೋಷ್ಟಿಯನ್ನು ಕರೆದಿದ್ದಾರೆಂದು ಹೇಳಲಾಗಿದೆ.

ರಾಹುಲ್ ಗಾಂಧಿಯವರನ್ನು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಣೆ ಮಾಡುವ ಮೂಲಕ ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುವುದು ಕಾಂಗ್ರೆಸ್ ಉದ್ದೇಶವೆಂದು ಹೇಳಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ