ಬಿಜೆಪಿ ಮುಖಂಡರಿಂದಲೇ ನನ್ನ ವಿರುದ್ಧ ಷಡ್ಯಂತ್ರ: ಬಿಜೆಪಿ ನಾಯಕ ಯಶ್ವಂತ್ ಸಿನ್ಹಾ ಆರೋಪ

ಗುರುವಾರ, 26 ಡಿಸೆಂಬರ್ 2013 (15:09 IST)
PTI
ಲೋಕಸಭೆ ಚುನಾವಣೆಯಲ್ಲಿ ಖಂಡಿತವಾಗಿಯೂ ಜಯಗಳಿಸುತ್ತೇನೆ ಎನ್ನುವ ಆತಂಕದಿಂದ ಬಿಜೆಪಿಯಲ್ಲಿನ ಒಂದು ಗುಂಪು ಹಜಾರಿಬಾಘ್ ಕ್ಷೇತ್ರದಲ್ಲಿ ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡ ಯಶ್ವಂತ್ ಸಿನ್ಹಾ ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸಬಾರದು ಎನ್ನುವ ಉದ್ದೇಶದಿಂದ ಬಿಜೆಪಿ ನಾಯಕರೇ ಹಲವಾರು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಬಿಜೆಪಿ ಪಕ್ಷಕ್ಕೆ ಬಿಜೆಪಿಯ ಮುಖಂಡರೇ ಶತ್ರುಗಳಾಗಿದ್ದಾರೆ ಎಂದು ಸಿನ್ಹಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಒಂದು ವೇಳೆ ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿದಲ್ಲಿ ಕೇಂದ್ರ ಸಚಿವನಾಗುತ್ತೇನೆ ಎನ್ನುವ ಆತಂಕದಿಂದ ಬಿಜೆಪಿಯ ಕೆಲ ಮುಖಂಡರು ತಂತ್ರ ನಡೆಸಿದ್ದಾರೆ. ಬಿಜೆಪಿ ಮುಖಂಡರ ಷಡ್ಯಂತ್ರದ ಬಗ್ಗೆ ಹಿಂದಿ ಪತ್ರಿಕೆಯೊಂದು ವರದಿ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತರ ರಾಜಕೀಯ ಪಕ್ಷಗಳು ಕೂಡಾ ನನ್ನನ್ನು ಸೋಲಿಸಲು ಬಿಜೆಪಿ ಮುಖಂಡರಿಗೆ ಹಣದ ನೆರವು ನೀಡುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಯಶ್ವಂತ್ ಸಿನ್ಹಾ ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ