ಬಿಜೆಪಿ ಸಂಸದ ನವಜೋತ್ ಸಿಂಗ್ ಸಿದ್ದು ಹುಡುಕಿಕೊಟ್ಟವರಿಗೆ 2 ಲಕ್ಷ ರೂ. ಬಹುಮಾನ

ಮಂಗಳವಾರ, 27 ಆಗಸ್ಟ್ 2013 (12:47 IST)
PTI
ಬಿಜೆಪಿ ಸಂಸದ ನವಜೋತ್ ಸಿಂಗ್ ಸಿದ್ದು ತಮ್ಮ ಸ್ವಕ್ಷೇತ್ರಕ್ಕೆ ಭೇಟಿ ನೀಡದಿರುವುದರಿಂದ ಬೇಸತ್ತು ಎನ್‌ಜಿಒ ಸಂಸ್ಥೆಯೊಂದು ಸಂಸದ ಸಿದ್ದು ಕಾಣೆಯಾಗಿದ್ದು ಹುಡುಕಿಕೊಟ್ಟವರಿಗೆ 2 ಲಕ್ಷ ರೂಪಾಯಿಗಳ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ.

ಅಮೃತ್‌ಸರ್ ಸಂಘರ್ಷ ಸಮಿತಿ ಅಧ್ಯಕ್ಷ ರಮನ್ ಬಕ್ಷಿ ಮಾತನಾಡಿ, ಅಮೃತಸರ್ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾದ ಸಿದ್ದು, ಕ್ಷೇತ್ರಕ್ಕೆ ಭೇಟಿ ನೀಡದೆ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಅದ್ದರಿಂದ ಅವರನ್ನು ಹುಡುಕಿಕೊಟ್ಟವರಿಗೆ ನಗದು ಬಹುಮಾನ ಘೋಷಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

ಅಮೃತಸರ್ ನಗರವನ್ನು ಪ್ಯಾರಿಸ್ ನಗರವನ್ನಾಗಿಸುವುದು ಸೇರಿದಂತೆ ಜನತೆಯ ಪ್ರತಿಯೊಂದು ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿ ಜಯಗಳಿಸಿದ್ದರು. ಇದೀಗ ಕ್ಷೇತ್ರಕ್ಕೆ ಭೇಟಿ ನೀಡದೆ ಕಾಣೆಯಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ