ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಖಚಿತ: ಕಮಲ್‌ನಾಥ್

ಮಂಗಳವಾರ, 26 ನವೆಂಬರ್ 2013 (15:27 IST)
PTI
ಕಳೆದ ಸೋಮವಾರದಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 140 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸುವ ವಿಶ್ವಾಸವಿದೆ ಎಂದು ಕೇಂದ್ರ ನಗರಾಭಿವೃದ್ಧಿ ಮತ್ತು ಸಂಸದೀಯ ಖಾತೆ ಸಚಿವ ಕಮಲ್‌ನಾಥ್ ಹೇಳಿದ್ದಾರೆ.

ಚಿಂದಾವಾರ್ ಜಿಲ್ಲೆಯಲ್ಲಿ ಇಂದು ನಡೆದ ಎರಡನೇ ಹಂತದ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಬಹುಮತಗಳಿಸಿ ಅಧಿಕಾರಕ್ಕೆ ಬರಲಿದೆ ಎಂದರು.

ಕಳೆದ 2008ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 71 ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ ಬಿಜೆಪಿ 141 ಕ್ಷೇತ್ರಗಳಲ್ಲಿ ಜಯಗಳಿಸಿ ಅಧಿಕಾರದ ಗದ್ದುಗೆ ಅಲಂಕರಿಸಿತ್ತು.

ಬಿಜೆಪಿ ಸರಕಾರದ 10 ವರ್ಷಗಳ ಭ್ರಷ್ಟಾಚಾರದ ಅವಧಿಯನ್ನು ಕಾಂಗ್ರೆಸ್ ಪಕ್ಷ ಕೊನೆಗಾಣಿಸಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಜನಪರ , ಬಡವರ, ಶೋಷಿತರ ಪರ ಯೋಜನೆಗಳನ್ನು ಜಾರಿಗೊಳಿಸಲಿದೆ ಎಂದು ಕಾಂಗ್ರೆಸ್ ಸಚಿವ ಕಮಲ್‌ನಾಥ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ