ಸೋನಿಯಾ , ರಾಹುಲ್ ವಿರುದ್ಧ ಪ್ರಚಾರ ಕಣಕ್ಕೆ ಇಳಿಯುತ್ತೇನೆ; ಬಾಬಾ ರಾಮದೇವ್

ಮಂಗಳವಾರ, 24 ಡಿಸೆಂಬರ್ 2013 (13:07 IST)
PTI
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಚಾರಕ್ಕೆ ಇಳಿಯುವುದಾಗಿ ಯೋಗಾ ಗುರು ಬಾಬಾ ರಾಮದೇವ್ ಹೇಳಿದ್ದಾರೆ.

ಸೋನಿಯಾ ಗಾಂಧಿ ಸ್ಪರ್ಧಿಸುವ ಕ್ಷೇತ್ರವಾದ ಅಮೇಥಿ ಮತ್ತು ರಾಹುಲ್ ಕ್ಷೇತ್ರವಾದ ರಾಯ್ ಬರೇಲಿಯಲ್ಲಿ ಅವರ ವಿರುದ್ಧ ವಿಶೇಷವಾಗಿ ಪ್ರಚಾರ ನಡೆಸಿ ಸೋಲಿಗೆ ಕಾರಣವಾಗುತ್ತೇನೆ ಎಂದು ಗುಡುಗಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮುಂಬರುವ ಚುನಾವಣೆಯಲ್ಲಿ ಬಹುಮತ ಪಡೆದ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನನ್ನ ಬೆಂಬಲ ಕೇವಲ ನರೇಂದ್ರ ಮೋದಿಗೆ ಮಾತ್ರ ಬಿಜೆಪಿ ಪಕ್ಷಕ್ಕಿಲ್ಲ. ಮೋದಿ ಲೋಕಸಭೆ ಚುನಾವಣೆಯಲ್ಲಿ 300 ಕ್ಷೇತ್ರಗಳನ್ನು ಗೆಲ್ಲಬೇಕು ಎನ್ನುವ ಉದ್ದೇಶದಿಂದ ನನ್ನ ಕೈಲಾದ ಮಟ್ಟಿಗೆ ಪ್ರಯತ್ನಿಸುತ್ತಿದ್ದೇನೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲ್ಲುವ ಅಭ್ಯರ್ಥಿಗಳ ಸಂಖ್ಯೆ ಎರಡಂಕಿಗೆ ಇಳಿಯಲಿದೆ. ಚುನಾವಣೆ ನಂತರ ಕಾಂಗ್ರೆಸ್ ವರ್ತಮಾನದ ಪಕ್ಷ ಮತ್ತು ಇತಿಹಾಸದ ಪುಟದಲ್ಲಿ ಸೇರಲಿದೆ ಎಂದು ಯೋಗಾ ಗುರು ಬಾಬಾ ರಾಮದೇವ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ