ಸೋಲಿನ ಭೀತಿಯಿಂದ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಘೋಷಿಸುತ್ತಿಲ್ಲ: ಸುಷ್ಮಾ

ಸೋಮವಾರ, 20 ಜನವರಿ 2014 (13:42 IST)
PTI
ಮುಂಬರುವ ಲೋಕಸಭೆ ಚುನಾವಣೆಯಲ್ಲಿನ ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುತ್ತಿಲ್ಲ ಎಂದು ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಲೇವಡಿ ಮಾಡಿದ್ದಾರೆ.

ಕೇಂದ್ರದ ಸಚಿವರು ಹಲವಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡಿದ್ದರೂ ಚಕಾರವೆತ್ತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಸಿಡಬ್ಲ್ಯೂಜಿ ಮತ್ತು ಸಿವಿಸಿ ಇಲಾಖೆಗಳ ದಕ್ಷತೆಯ ಬಗ್ಗೆ ಹೇಳಿಕೆ ನೀಡುತ್ತಿರುವುದು ವಿಪರ್ಯಾಸ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವ ಸಂಪ್ರದಾಯವಿಲ್ಲ ಎಂದು ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ. ಸಂಪ್ರದಾಯವೆಂದರೆ ತಮ್ಮ ಪ್ರಧಾನಿ ಯಾರಾಗುತ್ತಾರೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರಬೇಕೇ ಹೊರತು ಕೊನೆಯ ಕ್ಷಣದಲ್ಲಿ ಪ್ರಧಾನಿ ಆಯ್ಕೆಯಾಗುವಂತಹದಲ್ಲ ಎಂದು ಲೋಕಸಭೆಯ ವಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ತಿರುಗೇಟು ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ