ಹಾಸನ ಕ್ಷೇತ್ರದಿಂದಲೇ ಲೋಕಸಭೆಗೆ ಸ್ಪರ್ಧೆ: ದೇವೇಗೌಡರ ಘೋಷಣೆ

ಸೋಮವಾರ, 10 ಫೆಬ್ರವರಿ 2014 (13:06 IST)
PTI
ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಸೋಮವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ನಡೆದ ತೃತೀಯ ರಂಗದ ನಾಯಕರ ಸಭೆಯ ಬಳಿಕ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನಾನು ಮಾತ್ರ ಸ್ಫರ್ಧಿಸುವೆ. ನಮ್ಮ ಕುಟಂಬದಿಂದ ಬೇರೆ ಯಾರು ಸ್ಫರ್ಧಿಸಲ್ಲ ಎಂದು ತಿಳಿಸಿದ್ದಾರೆ.

ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿಯವರು ಚುನಾವಣೆಯಲ್ಲಿ ಸ್ಫರ್ಧಿಸಲ್ಲ ಎಂದ ಅವರು, ಎಲ್ಲಾ ಕಡೆ ಪ್ರಚಾರಕ್ಕೆ ಸಮಯಾವಕಾಶ ಕಡಿಮೆಯಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾನು ಏನು ಎಂಬುದನ್ನಾ ಜನರೇ ನಿರ್ಧರಿಸುತ್ತಾರೆ ಎಂದು ದೇವೇಗೌಡರು ಹೇಳಿದ್ದಾರೆ.

ಇಂದು ನಡೆದ ಸಭೆಯಲ್ಲಿ ರ್ಯಾಲಿಯನ್ನು ಎಲ್ಲಿ ನಡೆಸಬೇಕು ಎಂದು ನಿರ್ಧರಿಸಲಾಗಿದೆ. ಸಂಸತ್ ಅಧಿವೇಶನದ ಅಂತ್ಯದೊಳಗೆ 11 ಪಕ್ಷಗಳು ಸಭೆ ನಡೆಸಲಿದ್ದು, ಲೋಕಸಭಾ ಚುನಾವಣೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದ ಅವರು, ಬೇರೆ ಪಕ್ಷಗಳ ಸೇರ್ಪಡೆ ಬಗ್ಗೆ ಇನ್ನು ಚರ್ಚಿಸಿಲ್ಲ ಎಂದು ತಿಳಿಸಿದ್ದಾರೆ.

ಜೆಡಿಯು ಅಧ್ಯಕ್ಷ ಶರದ್ ಯಾದವ್, ಎ.ಬಿ ಬರ್ಧನ್, ಸಿಪಿಎಂ ಮುಖಂಡ ಪ್ರಕಾಶ್ ಕಾರಟ್ ಬಿಹಾರ್ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಅನೇಕ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

ವೆಬ್ದುನಿಯಾವನ್ನು ಓದಿ