‘ರಾಹುಲ್ ಗಾಂಧಿ ಏನು ಮಾತಾಡ್ತಿದ್ದಾರೆ ಎಂದು ಕಾಂಗ್ರೆಸ್ ನವರಿಗೇ ಅರ್ಥವಾಗುತ್ತಿಲ್ಲ’

ಬುಧವಾರ, 1 ನವೆಂಬರ್ 2017 (09:58 IST)
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ರಾಹುಲ್ ಏನು ಹೇಳ್ತಿದ್ದಾರೇಂತ ಅವರ ಪಕ್ಷದವರಿಗೇ ಅರ್ಥವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

 
ಹಿಮಾಚಲ ಪ್ರದೇಶ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಸಚಿವ ಗಡ್ಕರಿ ರಾಹುಲ್ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಬಡತನ ಮತ್ತು ಭ್ರಷ್ಟಾಚಾರ ನಿರ್ಮೂಲನೆಗೆ ನೆಹರೂ-ಗಾಂಧಿ ಕುಟುಂಬವೇ ಕಾರಣ ಎಂದಿದ್ದಾರೆ.

ನೆಹರೂ-ಗಾಂಧಿ ಕುಟುಂಬ ತಮ್ಮ ಕುಟುಂಬದವರ ಬಡತನ ನಿರ್ಮೂಲನೆ ಮಾಡಿದೆಯಷ್ಟೇ ಎಂದ ಅವರು ಕುಟುಂಬ ರಾಜಕಾರಣದ ವಿರುದ್ಧವೂ ಟೀಕಿಸಿದರು. ಕಾಂಗ್ರೆಸ್ ನಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ. ಹಾಗಾಗಿ ಬಿಜೆಪಿ ಅವಕಾಶ ಕೊಡಬೇಕು ಎಂದು ಗಡ್ಕರಿ ಮತದಾರರಲ್ಲಿ ಮನವಿ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ