ಸಂಸತ್ತು ಏನು ಮಾಡುತ್ತಿದೆ? ಗುಜರಾತ್ ದೇಶದ ಭಾಗವಲ್ಲವೇ?ಸಂಪೂರ್ಣ ಭಾರತದಾದ್ಯಂತ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಜಾರಿಗೊಳಿಸಬೇಕು ಎನ್ನುವ ಕಾಯ್ದೆಗೆ ಸಂಸತ್ತಿನಲ್ಲಿ ಅಂಗೀಕಾರ ದೊರೆತಿದೆ. ಗುಜರಾತ್ ಸರಕಾರ ಕಾಯ್ದೆ ಜಾರಿಗೊಳಿಸಿಲ್ಲ. ನಾಳೆ ಇತರ ರಾಜ್ಯಗಳು ಸಿಆರ್ಪಿಸಿ, ಐಪಿಸಿ ಮತ್ತು ಸಾಕ್ಷ್ಯಾಧಾರ ಕಾಯ್ದೆ ಜಾರಿಗೊಳಿಸುವುದಿಲ್ಲ ಎಂದಲ್ಲಿ ಸಂಸತ್ತು ಮೌನವಾಗಿರುತ್ತದೆಯೇ ಎಂದು ನ್ಯಾಯಮೂರ್ತಿ ಮದನ್ ಬಿ.ಲೋಕುರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.