‘ಸಾಲಮನ್ನಾ ಮಾಡುವುದು ರಾಜ್ಯಗಳಿಗೆ ಫ್ಯಾಶನ್ ಆಗಿಬಿಟ್ಟಿದೆ’

ಗುರುವಾರ, 22 ಜೂನ್ 2017 (12:27 IST)
ನವದೆಹಲಿ: ಇತ್ತೀಚೆಗಿನ ದಿನಗಳಲ್ಲಿ ಒಂದೊಂದೇ ರಾಜ್ಯಗಳು ರೈತರ ಸಾಲಮನ್ನಾ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಈ ವಿಚಾರ ರಾಜ್ಯಗಳಿಗೆ ಫ್ಯಾಶನ್ ಆಗಿಬಿಟ್ಟಿದೆ ಎಂದಿದ್ದಾರೆ.

 
ಸಾಲಮನ್ನಾ ವಿಚಾರವನ್ನು ರಾಜ್ಯಗಳು ರೈತರ ಸಾಲಮನ್ನಾವನ್ನೇ ಫ್ಯಾಶನ್ ಮಾಡಿಕೊಂಡು ಬಿಟ್ಟಿವೆ. ಎಲ್ಲಾ ಸಮಸ್ಯೆಗಳಿಗೂ ಸಾಲಮನ್ನಾವೇ ಪರಿಹಾರವಲ್ಲ. ಅಂತಹ ವಿಷಮ ಪರಿಸ್ಥಿತಿಯಲ್ಲಿ ಮಾತ್ರ ಸಾಲ ಮನ್ನಾ ಮಾಡಬೇಕು ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಸರ್ಕಾರ ಕೂಡಾ ರೈತರ ಸಾಲಮನ್ನಾ ಮಾಡಿದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಹಿಂದಿನಿಂದಲೂ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ ಎನ್ನುತ್ತಲೇ ಬಂದಿದೆ. ವಿಪರ್ಯಾಸವೆಂದರೆ ರಾಜ್ಯದಲ್ಲಿ ಸ್ವತಃ ಬಿಜೆಪಿ ಪಕ್ಷವೇ ರೈತರ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರದ ಮುಂದೆ ಪಟ್ಟು ಹಿಡಿದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ