ಮೂಲಗಳ ಪ್ರಕಾರ, ಒನ್ ರ್ಯಾಂಕ್ ಒನ್ ಪೆನ್ಶನ್ನಲ್ಲಿರುವ ವ್ಯತಿರಿಕ್ತ ಪರಿಣಾಮಗಳನ್ನು ಪರಿಹರಿಸಲು ಸಮಿತಿಯೊಂದನ್ನು ರಚಿಸುವಂತೆ ಆರೆಸೆಸ್ಸ್ ನಾಯಕರು , ಮೋದಿ ಸರಕಾರಕ್ಕೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ, ಅಮಿತ್ ಶಾ, ಎಂ.ವೆಂಕಯ್ಯ ನಾಯ್ಡು, ವಿಎಚ್ಪಿ ಕಾರ್ಯಕಾರಿ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರನ್ನು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.