ಪ್ರವಾಸಿ ಕಾರ್ಮಿಕರಿಗೆ 10 ಸಾವಿರ ರೂ. ನೀಡಬೇಕು ಎಂದ ಪ.ಬಂ. ಸಿಎಂಗೆ ಬಿಜೆಪಿ ಹೇಳಿದ್ದೇನು?

ಗುರುವಾರ, 4 ಜೂನ್ 2020 (08:00 IST)
ಕೋಲ್ಕತ್ತಾ : ಕೊರೊನಾ ಪರಿಹಾರ ಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪ್ರತಿ ಪ್ರವಾಸಿ ಕಾರ್ಮಿಕರ ಬ್ಯಾಂಕ್ ಖಾತೆಗೆ 10 ಸಾವಿರ ರೂ.ಗಳನ್ನು ನೀಡಬೇಕು ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.


ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯನ್ನು ಬಳಕೆ ಮಾಡಿಕೊಳ್ಲಲು ಇದು ಸೂಕ್ತ ಸಮಯ. ಕೊರೊನಾ ಸಂದರ್ಭದಲ್ಲಿ ಅಸಂಘಟಿತ ವಲಯ ಹಾಗೂ ಪ್ರವಾಸಿ ಕಾರ್ಮಿಕರಿಗೆ ಆರ್ಥಿಕ ಸಂಕಷ್ಟದಿಂದ ಹೊರಗೆ ಬರಲು ತಲಾ10 ಸಾವಿರ ರೂ.ಗಳನ್ನು ನೀಡಬೇಕು ಎಂದು ಹೇಳಿದ್ದಾರೆ.


ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಸಿನ್ಹಾ, ಸಿಎಂ ಮಮತಾ ಬ್ಯಾನರ್ಜಿಯವರು ಪ್ರವಾಸಿ ಕಾರ್ಮಿಕರನ್ನು ವಾಪಾಸ್ ಕರೆಯಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ತಮ್ಮ ಅವ್ಯವಸ್ಥೆಯನ್ನು ಮುಚ್ಚಿ ಹಾಕಲು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ