ಎಐಸಿಸಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ, ಮೋದಿ ಸರಕಾರ ನೀಡಿದ ಆಶ್ವಾಸನೆಗಳು ಎಲ್ಲಿವೆ? 100 ದಿನಗಳಲ್ಲಿ ಮೋದಿ ಸರಕಾರ ಸಾಧಿಸಿದ್ದೇನು ಎಂದು ಪ್ರಶ್ನಿಸಿದ್ದಾರೆ.
ಕೇಂದ್ರದಲ್ಲಿರುವ ಎನ್ಡಿಎ ಸರಕಾರದ ಆರ್ಥಿಕ ಕುಸಿತ, ದರ ಏರಿಕೆ, ವಿದೇಶಾಂಗ ನೀತಿಗಳಿಂದ ದೇಶದ ಜನತೆ ತತ್ತರಿಸಿದ್ದಾರೆ. ಅಚ್ಚೇ ದಿನ್ ಆಯೇಗಾ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಜನತೆಯನ್ನು ವಂಚಿಸಿದೆ ಎಂದು ಆರೋಪಿಸಿದ್ದಾರೆ.