2 ಜಿ ಹಗರಣದ ಎಲ್ಲಾ ಆರೋಪಿಗಳ ಖುಲಾಸೆ

ಗುರುವಾರ, 21 ಡಿಸೆಂಬರ್ 2017 (11:07 IST)
ನವದೆಹಲಿ: 2 ಜಿ ಸ್ಪೆಕ್ಟ್ರಂ ಹಗರಣದ ಎಲ್ಲಾ ಆರೋಪಿಗಳನ್ನು ದೆಹಲಿಯ ಪಟಿಯಾಲಾ ಕೋರ್ಟ್ ಆರೋಪದಿಂದ ಖುಲಾಸೆಗೊಳಿಸಿ ತೀರ್ಪು ನೀಡಿದೆ.
 

ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಹುದೊಡ್ಡ ಹಗರಣ ಇದಾಗಿತ್ತು. ಈ ಹಗರಣದಲ್ಲಿ ಮಾಜಿ ಸಚಿವ ಎ ರಾಜಾ, ಕರುಣಾನಿಧಿ ಪುತ್ರಿ ಕನ್ನಿಮೋಳಿ ಪ್ರಮುಖ ಆರೋಪಿಯಾಗಿದ್ದರು. ಈ ಇಬ್ಬರು ಪ್ರಮುಖರು ಸೇರಿದಂತೆ ಇದೀಗ ನ್ಯಾಯಾಲಯ ಒಟ್ಟು 17 ಆರೋಪಿಗಳನ್ನು ಖುಲಾಸೆಗೊಳಿಸಿದೆ.

ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಮೂರ್ತಿ ಒ.ಪಿ. ಸೈನಿ ಈ ತೀರ್ಪು ನೀಡಿದ್ದಾರೆ. ಸಚಿವ ಎ ರಾಜಾ, ಕನ್ನಿಮೋಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಕ್ ಬ್ಯಾಕ್ ತೆಗೆದುಕೊಂಡಿದ್ದಾರೆಂಬ ಆರೋಪಗಳನ್ನು ನ್ಯಾಯಾಲಯ ತಳ್ಳಿ ಹಾಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ