ಮಹಾರಾಷ್ಟ್ರ ಸರಕಾರದ ಗೃಹ, ಕಾನೂನು & ನ್ಯಾಯಾಂಗ ಇಲಾಖೆಗಳು ಸಪ್ಟೆಂಬರ್ 28, 2002 ರ ಸಲ್ಮಾನ್ ಖಾನ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ನಾವು ಹೊಂದಿಲ್ಲ ಎಂದು ಸ್ಪಷ್ಟಪಡಿಸಿವೆ.
ಮನ್ಸೂರ್ ದರ್ವೇಶ್ ಎಂಬ ಮಾಹಿತಿ ಹಕ್ಕು ಕಾರ್ಯಕರ್ತ ತಾವು ಸಲ್ಮಾನ್ ಖಾನ್ ಮಾಡಿದ್ದಾರೆ ಎನ್ನಲಾದ ಅಪಘಾತಕ್ಕೆ ಸಂಬಂಧಿಸಿದಂತೆ ಎಷ್ಟು ಹಣ ಖರ್ಚು ಮಾಡಲಾಗಿದೆ? ಎಂದು ಮಹಾರಾಷ್ಟ್ರ ಸರಕಾರಕ್ಕೆ ಮಾಹಿತಿ ಹಕ್ಕು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿ ಇಲ್ಲ. ದಕ್ಷಿಣ ಮುಂಬೈನಲ್ಲಿರುವ ಸರಕಾರದ ಪ್ರಧಾನ ಕಚೇರಿಯಲ್ಲಿ ಜೂನ್ 21, 2012ರಲ್ಲಿ ಸಂಭವಿಸಿದ ವಿನಾಶಕಾರಿ ಬೆಂಕಿ ಅನಾಹುತದಲ್ಲಿ ಅವು ಸುಟ್ಟು ಭಸ್ಮವಾಗಿವೆ ಎಂದು ಸರಕಾರ ಅದಕ್ಕುತ್ತರಿಸಿದೆ.
2002ರ ಅಕ್ಟೋಬರ್ 29ರಂದು ನಟ ಸಲ್ಮಾನ್ ಖಾನ್ ಅವರು ಚಲಿಸುತ್ತಿದ್ದ ಕಾರು ಫುಟ್ಪಾತ್ನಲ್ಲಿ ಮಲಗಿದ್ದ ಪಾದಚಾರಿಗಳ ಮೇಲೆ ಹರಿದ ಪರಿಣಾಮ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆ ಕಲಂ 304/2ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸತತವಾಗಿ ಹನ್ನೆರಡೂವರೆ ವರ್ಷಗಳ ಕಾಲ ವಿಚಾರಣೆ ನಡೆದಿತ್ತು.