ಸುದ್ದಿಗಾರರೊಂದಿಗೆ ಮಾತನಾಡಿದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಾಂತಕುಮಾರ್, ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಭೇಟಿಯಾದ ಮೂವರು ಸಚಿವರು ನಾನು ತೆಗೆದುಕೊಂಡ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ವ್ಯಾಪಂ, ಲಲಿತ್ಗೇಟ್ ಮತ್ತು ಮಹಾರಾಷ್ಟ್ರ ಸಚಿವರ ಭ್ರಷ್ಟಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಜೆಪಿ ಸಂಸದರನ್ನು ಉದ್ದೇಶಿಸಿ ಮಾತನಾಡಿ ಯಾವುದೇ ಹೇಳಿಕೆಯನ್ನು ನೀಡುವ ಮುನ್ನ ನಾಯಕರನ್ನು ಸಂಪರ್ಕಿಸುವುದು ಕಡ್ಡಾಯ ಎಂದು ಹೇಳಿದ ನಂತರ, ಇದೀಗ ಮೋದಿ ಆದೇಶವನ್ನು ಉಲ್ಲಂಘಿಸಿ ಶಾಂತಕುಮಾರ್ ಹೇಳಿಕೆ ನೀಡಿರುವುದು ಬಿಜೆಪಿ ನಾಯಕರಲ್ಲಿ ಭಿನ್ನಮತ ಉಲ್ಬಣಿಸಿದಂತಾಗಿದೆ.