ರಾಜ್ಯಸಭೆ: 6 ಟಿಎಂಸಿ ಸಂಸದರ ಅಮಾನತು

ಬುಧವಾರ, 4 ಆಗಸ್ಟ್ 2021 (17:26 IST)
ಪಾಲಿಸಲ್ಲ ಎಂಬ ನಾಮಫಲಕ ಪ್ರದರ್ಶಿಸಿದ ತೃಣಮೂಲ ಕಾಂಗ್ರೆಸ್ ಪಕ್ಷದ 6 ಸಂಸದರನ್ನು ರಾಜ್ಯಸಭಾ ಕಲಾಪದಿಂದ ಅಮಾನತು ಮಾಡಲಾಗಿದೆ.
ಪೆಗಾಸಾಸ್ ಗುಪ್ತಚಾರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಟಿಎಂಸಿ ಕಾರ್ಯಕರ್ತರಿಂದ ಮಂಗಳವಾರ ರಾಜ್ಯಸಭೆಯಲ್ಲಿ ಕಲಾಪಕ್ಕೆ ಅಡ್ಡಿಯುಂಟಾಯಿತು. ಈ ಹಿನ್ನೆಲೆಯಲ್ಲಿ ಟಿಎಂಸಿ ಕಾರ್ಯಕರ್ತರನ್ನು ದಿನದ ಮಟ್ಟಿಗೆ ಅಮಾನತು ಮಾಡಲಾಯಿತು.
ಡೋಲಾ ಸೇನ್, ಮೊಹಮದ್ ನಡಿಮುಲ್ ಹಕ್, ಅಬಿರ್ ರಂಜನ್ ಬಿಸ್ವಾಸ್, ಸಂತ ಛೆಟ್ರಿ, ಅರ್ಪಿತಾ ಘೋಷ್, ಮೌಸಮ್ ನೂರ್ ಅವರನ್ನು ದಿನದ ಕಲಾಪದ ಮಟ್ಟಿಗೆ ಅಮಾನತು ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ