ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ ಬಾಲಕನಿಗೆ ಥಳಿತ

ಶುಕ್ರವಾರ, 30 ಡಿಸೆಂಬರ್ 2022 (13:34 IST)
ಭೋಪಾಲ್ : ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಲು ನಿರಾಕರಿಸಿದ 10 ವರ್ಷದ ಮುಸ್ಲಿಂ ಬಾಲಕನಿಗೆ ಥಳಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಕೋಮು ಸೂಕ್ಷ್ಮ ಪ್ರದೇಶವಾಗಿರುವ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಘಟನೆಯ ಬಳಿಕ ಪೊಲೀಸರು ಆರೋಪಿ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಗುರುವಾರ ಸಂಜೆ ಖಾಂಡ್ವಾದ ಪಂಧನಾ ಪ್ರದೇಶದಲ್ಲಿ ಬಾಲಕ ಅಭ್ಯಾಸಕ್ಕೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಅಜಯ್ ಭಿಲ್ ಎಂದು ಗುರುತಿಸಲಾದ ಆರೋಪಿ ಬಾಲಕನನ್ನು ತಡೆದು ಜೈ ಶ್ರೀ ರಾಮ್ ಎಂದು ಹೇಳಲು ಒತ್ತಾಯಿಸಿದ್ದಾನೆ ಎಂದು ತಿಳಿದುಬಂದಿದೆ. 

ಆರಂಭದಲ್ಲಿ ಬಾಲಕ ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ್ದಾನೆ. ಇದಕ್ಕೆ ಕೋಪಗೊಂಡ ವ್ಯಕ್ತಿ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಇದರಿಂದ ಭಯಭೀತನಾದ ಬಾಲಕ ಘೋಷಣೆ ಕೂಗಿದ್ದು, ಬಳಿಕ ಆರೋಪಿ ಆತನನ್ನು ಹೋಗಲು ಬಿಟ್ಟಿದ್ದಾನೆ.

ನಡೆದೆಲ್ಲಾ ಘಟನೆಯ ಬಗ್ಗೆ ಬಾಲಕ ಬಳಿಕ ತನ್ನ ಪೋಷಕರಿಗೆ ತಿಳಿಸಿದ್ದಾನೆ. ಬಾಲಕನ ತಂದೆ ಪಂಧನಾ ಪೊಲೀಸ್ ಠಾಣೆಗೆ ತೆರಳಿ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ