ಮಾಂಸ ತಂದಿಲ್ಲ ಎಂದು ಜಗಳ, ಪತ್ನಿಯ ಕೊಲೆಯಲ್ಲಿ ಅಂತ್ಯ!

ಮಂಗಳವಾರ, 28 ಮಾರ್ಚ್ 2023 (12:09 IST)
ಲಕ್ನೋ : ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಪತ್ನಿ ಬರ್ಬರ ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತಪ್ರದೇಶದ ಆಲಿಘರ್ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿ ಪತ್ನಿಯನ್ನು ಗುಡ್ಡೋ(30) ಎಂದು ಗುರುತಿಸಲಾಗಿದೆ. ಈಕೆಯನ್ನು ಪತಿ ಸಾಗಿರ್ ಕೊಲೆಗೈದಿದ್ದಾನೆ. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ.
 
ಇಂದು (ಸೋಮವಾರ) ಮಾಂಸ ತರದಿದ್ದಕ್ಕೆ ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಸಿಟ್ಟಿನಿಂದ ಸಾಗಿರ್, ಅಲ್ಲೇ ಇದ್ದ ಚಾಕು ತೆಗೆದುಕೊಂಡು ಮಕ್ಕಳ ಮುಂದೆಯೇ ಪತ್ನಿಯ ಕತ್ತು ಸೀಳಿದ್ದಾನೆ.  ಇತ್ತ ಅಮ್ಮನನ್ನು ಕೊಲೆ ಮಾಡಿದ್ದರಿಂದ ಭಯಗೊಂಡ ಮಕ್ಕಳು ಜೋರಾಗಿ ಕಿರುಚಾಡಿವೆ. ಇದರಿಂದ ಅಕ್ಕಪಕ್ಕದ ನಿವಾಸಿಗಳು ಓಡಿಬಂದಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.

ಅಲ್ಲದೆ ಆರೋಪಿ ಸಾಗಿರ್ ನ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಮೂವರು ಮಕ್ಕಳಲ್ಲಿ ಓರ್ವ ಮಗಳು, ಪೊಲೀಸರಿಗೆ ನಡೆದ ಘಟನೆಯನ್ನು ಎಳೆಎಳೆಯಾಗಿ ವಿವರಿಸಿದ್ದಾಳೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ