ಸೀಬೆ ಹಣ್ಣು ಕಿತ್ತಿದ್ದಕ್ಕೆ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಕೊಲೆ !
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿರುವ ವ್ಯಕ್ತಿ ಓಂ ಪ್ರಕಾಶ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಅವರ ಸಹೋದರ ಸತ್ಯ ಪ್ರಕಾಶ್ ಪೊಲೀಸರಿಗೆ ದೂರು ನೀಡಿದ್ದಾರೆ.
ನನ್ನ ಸಹೋದರ ಹಸಿವನ್ನು ತಣಿಸಿಕೊಳ್ಳಲು ಹೊರಗಡೆ ಹೋಗಿದ್ದ. ಆತ ಇತರರ ತೋಟದಿಂದ ಒಂದು ಸೀಬೆ ಹಣ್ಣನ್ನು ಕಿತ್ತು ತಿಂದಿದ್ದಕ್ಕೆ ಹೊಡೆದು ಸಾಯಿಸಿದ್ದಾರೆ. ಈ ವಿಚಾರವನ್ನು ಒಬ್ಬ ಹುಡುಗ ಬಂದು ಹೇಳಿದಾಗಲೇ ನಮಗೆ ವಿಷಯ ತಿಳಿಯಿತು ಎಂದಿದ್ದಾರೆ.
ಘಟನೆಯ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಓಂ ಪ್ರಕಾಶ್ನನ್ನು ಮೊದಲಿಗೆ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.