ಪ್ರಾಂಶುಪಾಲರ ಮೇಲೆ ಕತ್ತರಿಯಿಂದ ಹಲ್ಲೆ ಮಾಡಿದ ವಿದ್ಯಾರ್ಥಿ. ಕಾರಣವೇನು ಗೊತ್ತಾ?

ಶನಿವಾರ, 7 ಡಿಸೆಂಬರ್ 2019 (13:11 IST)
ಗುಜರಾತ್ : ಪರೀಕ್ಷೆಯಲ್ಲಿ ನಕಲಿ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಪ್ರಾಂಶುಪಾಲರ ಮೇಲೆ ಕತ್ತರಿಯಿಂದ ಹಲ್ಲೆ ಮಾಡಿರುವ ಘಟನೆ ಗುಜರಾತಿನ ಜಾಮನಗರದ ವಿಎಂ ಮಹ್ತಾ ಕಾಲೇಜಿನಲ್ಲಿ ನಡೆದಿದೆ.



ಬಿಎಂ ಪ್ರಥಮ ಸೆಮಿಸ್ಟರ್ ಎಕ್ಸಾಂ ಬರೆಯುತ್ತಿದ್ದ ವಿದ್ಯಾರ್ಥಿ ಮೊಬೈಲ್ ನಿಂದ ನಕಲಿ ಮಾಡಿದ ಕಾರಣ ಪ್ರಾಂಶುಪಾಲರು ಕ್ರಮ ಕೈಗೊಳ್ಳಲು ಮುಂದಾದರು. ಆ ವೇಳೆ ರೊಚ್ಚಿಗೆದ್ದ ವಿದ್ಯಾರ್ಥಿ ಪ್ರಾಂಶುಪಾಲರ ಮೇಲೆ ಕತ್ತಿರಿಯಿಂದ ಹಲ್ಲೆ ಮಾಡಿದ್ದಾನೆ.


ಹಲ್ಲೆಗೊಂಡ ಪ್ರಾಂಶುಪಾಲರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ವಿದ್ಯಾರ್ಥಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಈ ದೃಶ್ಯ ಕಾಲೇಜಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ