ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳ ವಿರೋಧಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತನಿಂದ ಸಜೀವ ದಹನ ಯತ್ನ

ಮಂಗಳವಾರ, 31 ಮಾರ್ಚ್ 2015 (15:46 IST)
ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಶುಲ್ಕವನ್ನು ಹೆಚ್ಚಳಗೊಳಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರೊಬ್ಬರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಜೀವವಾಗಿ ದಹಿಸಿಕೊಳ್ಳುವ ವಿಫಲ ಪ್ರಯತ್ನ ನಡೆಸಿದ್ದಾರೆ.

ಆಮ್ ಆದ್ಮಿ ಪಕ್ಷದ ಸದಸ್ಯ ಕ್ರಾಂತಿಕಾರಿ ಸಿಂಗ್ ತಮ್ಮನ್ನು ತಾವು ಸಜೀವವಾಗಿ ದಹಿಸಿಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಮೊದಲೇ ಲಭಿಸಿದ್ದರಿಂದ ಬೆಂಕಿ ಹಚ್ಚಿಕೊಳ್ಳುವ ಮುನ್ನವೇ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಝಾ ತಿಳಿಸಿದ್ದಾರೆ.

35 ವರ್ಷ ವಯಸ್ಸಿನ ಕ್ರಾಂತಿ ಸಿಂಗ್ ಜೊತೆಯಲ್ಲಿ ಇತರ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ. ಕ್ರಾಂತಿ ಸಿಂಗ್‌ರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಖಾಸಗಿ ಶಾಲೆಗಳು ಶುಲ್ಕ ಹೆಚ್ಚಳಗೊಳಿಸಿದ್ದನ್ನು ವಿರೋಧಿಸಿ ಜಿಲ್ಲಾಡಳಿತದ ಗಮನ ಸೆಳೆಯಲು ಸಿಂಗ್ ತನ್ನನ್ನು ತಾನು ಸಜೀವವಾಗಿ ದಹಿಸಿಕೊಳ್ಳಲು ಪ್ರಯತ್ನಿಸಿದ ಎಂದು ಪೊಲೀಸ್ ಅಧಿಕಾರಿ ಜಿತೇಂದ್ರ ಕುಮಾರ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ