ಆಪ್ ಶಾಸಕಿ ಅಲ್ಕಾ ಲಾಂಬಾ ವಿರುದ್ಧ ಬಿಜೆಪಿ ಶಾಸಕ ಶರ್ಮಾ ಬಳಸಿರುವ ಭಾಷೆಯ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಘಾತ ವ್ಯಕ್ತಪಡಿಸಿದ್ದು, ಬಿಜೆಪಿ ಹೈಕಮಾಂಡ್ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಅಧಿಕಾರದಲ್ಲಿರುವ ಕೇಜ್ರಿವಾಲ್ ನೇತೃತ್ವದ ಸರಕಾರ ನಿರಾಶ್ರಿತರನ್ನು ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ವಿಪಕ್ಷ ನಾಯಕ ವಿಜೇಂದರ್ ಗುಪ್ತಾ ಆರೋಪಿಸಿದ್ದರು. ಚರ್ಚೆಯಲ್ಲಿ ಮಧ್ಯಪ್ರವೇಶಿಸಿದ ಆಪ್ ಶಾಸಕಿ ಲಾಂಬಾ ಚಳಿಯಿಂದ ಯಾರು ಸಾವನ್ನಪ್ಪುತ್ತಿಲ್ಲ ಬದಲಾಗಿ ಡ್ರಗ್ಸ್ ಸೇವನೆಯಿಂದ ಇಹಲೋಕ ತ್ಯಜಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಶರ್ಮಾ ಲಾಂಬಾ ವಿರುದ್ಧ ಅಸಭ್ಯ ಪದ ಬಳಕೆ ಮಾಡಿದ್ದರು ಎನ್ನಲಾಗಿದೆ.