ಭಾನುವಾರ ಗೋವಾದ ಶಿರೋಡಾದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಆಪ್ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಗೋವಾದಲ್ಲಿ ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎಂದಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ನಾವು ಅಧಿಕಾರ ಹಿಡಿದರೆ ಅದಕ್ಕೆ ಇತಿಶ್ರೀ ಹಾಡುತ್ತೇವೆ. ಗೋವಾದಲ್ಲಿ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ವ್ಯಾಪಕ ಗಣಿಗಾರಿಕೆ ನಡೆದಿತ್ತು. ಇದರ ವಿರುದ್ಧ ಧ್ವನಿ ಎತ್ತಿ ಅಧಿಕಾರ ಹಿಡಿದಿದ್ದ ಬಿಜೆಪಿ ಯಾರ ವಿರುದ್ಧ ಕ್ರಮವನ್ನು ಕೂಡ ಕೈಗೊಳ್ಳಲಿಲ್ಲ. ಇದರಿಂದ ಬಿಜೆಪಿ ಮೇಲೆ ಸಹ ಜನರೀಗ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.