ತಮಿಳುನಾಡು ವಿಧಾನಸಭೆ ಚುನಾವಣೆ; ಕಣಕ್ಕಿಳಿಯಲು ಕೇಜ್ರಿವಾಲ್ ಪಕ್ಷದ ಸಿದ್ಧತೆ
ಶುಕ್ರವಾರ, 12 ಫೆಬ್ರವರಿ 2016 (14:33 IST)
ತಮಿಳುನಾಡಿನ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಆಪ್ ಮೂಲಗಳು ತಿಳಿಸಿವೆ.
ವೈಕೋ ನೇತೃತ್ವದ ಎಂಡಿಎಂಕೆ ಮತ್ತು ಇತರ ಎಡಪಕ್ಷಗಳ ಮೈತ್ರಿಕೂಟವಾದ ಪೀಪಲ್ಸ್ ವೆಲ್ಫೇರ್ ಫ್ರಂಟ್ನೊಂದಿಗೆ ಮೈತ್ರಿ ಮಾಡಿಕೊಂಡು ಆಪ್ ಕಣಕ್ಕಿಳಿಯಲು ಚಿಂತನೆ ನಡೆಸಿದೆ ಎನ್ನಲಾಗಿದೆ.
ಆಮ್ ಆದ್ಮಿ ಪಕ್ಷದ ನಾಯಕ ಸೋಮನಾಥ್ ಭಾರತಿ ಚೆನ್ನೈ ನಗರಕ್ಕೆ ಆಗಮಿಸಿದ್ದು, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಇತರ ಪಕ್ಷಗಳೊಂದಿಗೆ ಮೈತ್ರಿ ಮತ್ತು ರಣತಂತ್ರ ರೂಪಿಸಲಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ.
ಸೋಮನಾಥ್ ಭಾರತಿ, ಎಂಡಿಎಂಕೆ ಪಕ್ಷದ ಮುಖಂಡ ವೈಕೋ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ನಂತರ ಸಿಪಿಐ ಮತ್ತು ಸಿಪಿಎಂ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ಆಪ್ ವಕ್ತಾರರು ತಿಳಿಸಿದ್ದಾರೆ.