ಸರಕಾರಿ ಅಧಿಕಾರಿಗಳ ಕರ್ತವ್ಯನಿರ್ವಹಣೆಗೆ ಅಡ್ಡಿ: ಆಪ್ ಶಾಸಕ ಯಾದವ್ ಬಂಧನ
ಶುಕ್ರವಾರ, 29 ಜನವರಿ 2016 (16:07 IST)
ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆಮ್ ಆದ್ಮಿ ಪಕ್ಷದ ಶಾಸಕ ಮಹೇಂದ್ರ ಯಾದವ್ರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ವಿಕಾಸ್ಪುರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಾದವ್, ಸರಕಾರಿ ಅಧಿಕಾರಿಗಳು ಕರ್ತವ್ಯನಿರ್ವಹಿಸುವಾಗ ಅಡ್ಡಿ ಪಡಿಸಿದ್ದಲ್ಲದೇ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.
ಆಪ್ ಶಾಸಕ ಮಹೇಂದ್ರ ಯಾದವ್ರನ್ನು ತೀಸ್ ಹಜಾರಿ ಕೋರ್ಟ್ಗೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರದ ಪ್ರಕರಣನ್ನು ದಾಖಲಿಸಲು ದೆಹಲಿ ಪೊಲೀಸರು ನಿರಾಕರಿಸಿರುವುದನ್ನು ವಿರೋಧಿಸಿ ಆಪ್ ಶಾಸಕ ಮಹೇಂದ್ರ ಯಾದವ್ ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.