ಘಟನೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಾದ ರೂಪೇಶ್ ಕಟ್ಯಾನಿ, ದೇವೇಂದ್ರ ಕುಮಾರ್, ರೋಶನ್ ಕುಮಾರ್ ಮತ್ತು ಶೈಲೇಶ್ ಕುಮಾರ್ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪೊಲೀಸ್ ಮೂಲಗಳ ಪ್ರಕಾರ, ಮೂರು ವರ್ಷ ವಯಸ್ಸಿನ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕುರಿತಂತೆ ಪ್ರಕರಣ ದಾಖಲಿಸಲು ನಿರಾಕರಿಸಿದಾಗ, ಪಶ್ಚಿಮ ದೆಹಲಿಯ ನಿಹಾಲ್ ವಿಹಾರ್ ಪ್ರದೇಶದಲ್ಲಿ ಆಪ್ ಶಾಸಕ ಯಾದವ್ ತಮ್ಮ ಬೆಂಬಲಿಗರೊಂದಿಗೆ ಹಿಂಸಾಚಾರದಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿತ್ತು.