ಆಪ್ ಶಾಸಕರಾದ ಪ್ರವೀಣ್ ದೇಶಮುಖ್, ಸೌರಭ್ ಭಾರಧ್ವಾಜ್ ಸರಿತಾ ಸಿಂಗ್, ಸಂಜೀವ್ ಝಾ ಮತ್ತು ಸೋಮದುತ್ತ ವೇತನ ಹೆಚ್ಚಿಸಿವಂತೆ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಆಮ್ ಆದ್ಮಿ ಪಕ್ಷದ ಶಾಸಕ ಸೌರಭ್ ಭಾರಧ್ವಾಜ್ ಮಾತನಾಡಿ, ಪ್ರಸ್ತಪತ ಶಾಸಕರಿಗೆ ನೀಡುತ್ತಿರುವ ವೇತನದಲ್ಲಿ ಕುಟುಂಬವನ್ನು ಸರಿದೂಗಿಸಿಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೆಲ ಶಾಸಕರು ವೇತನ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ. ವೇತನ ಹೆಚ್ಚಳ ಕುರಿತಂತೆ ಸದನದಲ್ಲಿ ಅರ್ಥಪೂರ್ಣ ಚರ್ಚೆಯಾಗಬೇಕು ಎಂದು ಹೇಳಿದ್ದಾರೆ.
ನಮ್ಮ ಮನೆಗೆ ತಮ್ಮ ಅಹವಾಲುಗಳನ್ನು ಹೊತ್ತುಕೊಂಡು ಪ್ರತಿನಿತ್ಯ ಮನೆಗೆ ಜನತೆ ಬರುತ್ತಾರೆ. ಅವರಿಗೆ ಕನಿಷ್ಠ ಒಂದು ಕಪ್ ಚಹಾ ನೀಡಬೇಕಾಗುತ್ತದೆ. ನಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಬಾರಿ ಪ್ರಯಾಣಿಸಬೇಕಾಗುತ್ತದೆ. ಆದ್ದರಿಂದ, ಸರಕಾರ ನೀಡುತ್ತಿರುವ ವೇತನ ನಮಗೆ ಸಾಕಾಗುತ್ತಿಲ್ಲ ಎಂದು ಆಮ್ ಆದ್ಮಿ ಶಾಸಕರ ತಿಳಿಸಿದ್ದಾರೆ.