ಸೋನಿಯಾ, ಸಿಎಂ ಸಿದ್ದರಾಮಯ್ಯ ಭೇಟಿ ನಂತ್ರ ಸಂಪುಟ ಪುನಾರಚನೆ: ಖರ್ಗೆ

ಶುಕ್ರವಾರ, 17 ಜೂನ್ 2016 (13:06 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದು, ನಂತರವಷ್ಟೆ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
 
ಸಂಸತ್ತಿನ ವಿಷಯವಾಗಿ ಚರ್ಚಿಸಲು ಸೋನಿಯಾ ನಿವಾಸಕ್ಕೆ ಆಗಮಿಸಿದ್ದಾಗಿ ತಿಳಿಸಿದ ಖರ್ಗೆ, ಬೇರೆ ಬೇರೆ ಕಾರಣಗಳಿಂದಾಗಿ ಕೆಲವು ಸಚಿವರನ್ನು ಕೈಬಿಡಲು ಆಗಲ್ಲ ಎಂದು ಸೋನಿಯಾಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ತಿಳಿಸಿದ್ದಾರೆ. 
 
ಸುಮಾರು 40 ನಿಮಿಷಗಳ ಕಾಲ ಸೋನಿಯಾ ಗಾಂದಿಯವರೊಂದಿಗೆ ಚರ್ಚಿಸಿ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. 
 
ವಿಧಾನಪರಿಷತ್ ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆಯವರ ಅಭಿಪ್ರಾಯವನ್ನು ಪರಿಗಣಿಸಿದ್ದ ಸೋನಿಯಾ, ಸಂಪುಟ ಪುನಾರಚನೆಯಲ್ಲೂ ಅವರ ಅಭಿಪ್ರಾಯವನ್ನು ಗಂಭೀರವಾಗಿ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ