ಎಐಎಡಿಎಂಕೆ ರಾಜ್ಯಸಭೆ ಸದಸ್ಯೆ ಶಶಿಕಲಾ ಮೇಲೆ ಕಾರ್ಯಕರ್ತರಿಂದ ಹಲ್ಲೆ

ಬುಧವಾರ, 28 ಡಿಸೆಂಬರ್ 2016 (15:16 IST)
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕಾಗಿ ನಾಮಪತ್ರ ಸಲ್ಲಿಸಲು ಬಂದಿದ್ದ ಎಐಎಡಿಎಂಕೆ ಪಕ್ಷದ ಅಮಾನತುಗೊಂಡ ರಾಜ್ಯ ಸಭೆ ಸದಸ್ಯೆ ಶಶಿಕಲಾ ಪುಷ್ಪಾ ಮತ್ತು ಅವರ ವಕೀಲರ ಮೇಲೆ ಎಐಎಡಿಎಂಕೆ ಪಕ್ಷದ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.
ವರದಿಗಳ ಪ್ರಕಾರ, ನಗರದ ರಾಯಪೇಟೆಯಲ್ಲಿರುವ ಪಕ್ಷದ ಕೇಂದ್ರ ಕಚೇರಿಗೆ ನಾಲ್ವರು ವಕೀಲರೊಂದಿಗೆ ರಾಜ್ಯಸಭೆ ಸದಸ್ಯೆ ಶಶಿಕಲಾ ಪುಷ್ಪಾ ಆಗಮಿಸಿದಾಗ, ಎಐಎಡಿಎಂಕೆ ಕಾರ್ಯಕರ್ತರಲ್ಲಿ ಪರಸ್ಪರ ಹೊಡೆದಾಟ ನಡೆದಿದೆ ಎಂದು ಮೂಲಗಳು ತಿಳಿಸಿವೆ.  
ಏತನ್ಮಧ್ಯೆ ಗಂಭೀರವಾಗಿ ಗಾಯಗೊಂಡ ಶಶಿಕಲಾ ಪರ ವಕೀಲರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಶಶಿಕಲಾ ಬೆಂಬಲಿಗರು ತಿಳಿಸಿದ್ದಾರೆ.
 
ನಾಳೆ ನಡೆಯಲಿರುವ ಪಕ್ಷದ ಸಾಮಾನ್ಯ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆ ನೇಮಕವನ್ನು ತಡೆಯುವಂತೆ ಕೋರಿ ಶಶಿಕಲಾ ಪುಷ್ಪಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ