Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

Sampriya

ಶನಿವಾರ, 14 ಜೂನ್ 2025 (17:00 IST)
Photo Courtesy X
ನವದೆಹಲಿ: ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಕಟ್ಟಡದ ಒಳಗಿದ್ದ ಬಿ.ಜೆ ಮೆಡಿಕಲ್‌ ಕಾಲೇಜಿನ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಬಿ.ಜೆ. ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯರ ಸಂಘ ದೃಢಪಡಿಸಿದೆ.

2023ನೇ ಬ್ಯಾಚ್‌ನ ಜಯಪ್ರಕಾಶ್ ಚೌಧರಿ, ರಾಕೇಶ್ ದಿಹೋರಾ ಹಾಗೂ 2024ನೇ ಬ್ಯಾಚ್‌ನ ಆರ್ಯನ್ ರಜಪೂತ್, ಮಾನವ್ ಬಾದು ಎಂಬುವವರು ಮೃತಪಟ್ಟ ದುರ್ದೈವಿಗಳು. ಅವಘಡದಲ್ಲಿ ಇತರೆ 20 ಎಂಬಿಬಿಎಸ್ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆ ಪೈಕಿ 11 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜೆಡಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಮಾನ ದುರಂತದಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಮೃತಪಟ್ಟಿದ್ದಾರೆ ಎಂಬ ವದಂತಿಗಳು ಹರಿದಾಡಿತ್ತು. ಈ ರೀತಿಯ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ವೈದ್ಯರ ಸಂಘ ಮನವಿ ಮಾಡಿದೆ.

‘ಅತುಲ್ಯಂ’ ಕಟ್ಟಡದಲ್ಲಿ ವಾಸಿಸುತ್ತಿದ್ದ ಸೂಪರ್ ಸ್ಪೆಷಾಲಿಟಿ ವೈದ್ಯರ ಕುಟುಂಬದ ನಾಲ್ವರು ಸದಸ್ಯರು ಸಹ ಸಾವಿಗೀಡಾಗಿದ್ದಾರೆ ಎಂದು ವೈದ್ಯರ ಸಂಘ ವಿವರಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ