ಜಮ್ಮು: ಅಹಮದಾಬಾದ್ನಿಂದ ಲಂಡನ್ಗೆ ತೆರಳುತ್ತಿದ್ದ ವಿಮಾನ ಪತನವಾಗಿ 271ಕ್ಕೂ ಅಧಿಕ ಮಂದಿ ಮೃತಪಟ್ಟ ಬಳಿಕ ಏರ್ ಇಂಡಿಯಾದ ಹಲವು ವಿಮಾನಗಳಲ್ಲಿ ತಾಂತ್ರಿಕ ದೋಷದ ಬಗ್ಗೆ ವರದಿಯಾಗುತ್ತಿದೆ.
ಇಂದು ಮತ್ತೊಂದು ಏರ್ ಇಂಡಿಯಾ ವಿಮಾನವು ಪ್ರಯಾಣಿಕರನ್ನು ಗೊಂದಲಕ್ಕೆ ಸಿಲುಕಿಸಿದೆ. ದೆಹಲಿಯಿಂದ ಜಮ್ಮು ಮೂಲಕ ಶ್ರೀನಗರಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಮಧ್ಯಾಹ್ನ ಇಲ್ಲಿ ಲ್ಯಾಂಡ್ ಆಗದೆ ದೆಹಲಿ ವಿಮಾನ ನಿಲ್ದಾಣಕ್ಕೆ ವಾಪಸಾಗಿದೆ.
ಐಎಕ್ಸ್-2564 ವಿಮಾನವು ಶ್ರೀನಗರಕ್ಕೆ ಹೊರಟಿತ್ತು. ಮಧ್ಯಾಹ್ನದ ಸುಮಾರಿಗೆ ಜಮ್ಮುವಿನಲ್ಲಿ ನಿಲುಗಡೆ ಇತ್ತು, ಆದರೆ, ಅದು ದೆಹಲಿಗೆ ಹಿಂದಿರುಗಿದೆ. ಹಿಂದಿರುಗುವುದಕ್ಕೂ ಮುನ್ನ ವಿಮಾನ ಕೆಲ ಕಾಲ ಜಮ್ಮು ವಿಮಾನ ನಿಲ್ದಾಣದ ಮೇಲೆ ಹಾರಾಟ ನಡೆಸಿದೆ.
ವಿಮಾನ ಲ್ಯಾಂಡ್ ಆಗದೆ ದೆಹಲಿಗೆ ಹಿಂದಿರುಗಲು ಕಾರಣವೇನೆಂದು ತಕ್ಷಣಕ್ಕೆ ತಿಳಿದುಬಂದಿಲ್ಲ. ಹವಾಮಾನದಲ್ಲಿ ಯಾವುದೇ ತೊಂದರೆ ಇರಲಿಲ್ಲ. ರನ್ವೇ ಸ್ಪಷ್ಟವಾಗಿತ್ತು, ಆದರೆ, ಪೈಲಟ್ಗೆ ಸೂಕ್ತವಾದ ಲ್ಯಾಂಡಿಂಗ್ ಪ್ರದೇಶವನ್ನು ಕಂಡುಕೊಳ್ಳಲಾಗಲಿಲ್ಲ ಎಂಬಂತೆ ತೋರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.