Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video
ನಿನ್ನೆ ಮಧ್ಯಾಹ್ನ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸಾಕಷ್ಟು ಜನ ಸಾವನ್ನಪ್ಪಿದ್ದಾರೆ. ಮತ್ತೆ ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತದೇಹಗಳ ಶೋಧ ಕಾರ್ಯ ಈಗಲೂ ಮುಂದುವರಿದಿದೆ.
ನಿನ್ನೆ ಶೋಧ ಕಾರ್ಯ ನಡೆಸುತ್ತಿದ್ದ ಸಿಬ್ಬಂದಿಗಳಿಗೆ ಅಚ್ಚರಿಯ ವಸ್ತುವೊಂದು ಪತ್ತೆಯಾಗಿದೆ. ಇಡೀ ವಿಮಾನವೇ ಉರಿದು ಭಸ್ಮವಾಗಿದ್ದರೂ ಭಗವದ್ಗೀತೆ ಪುಸ್ತಕವೊಂದು ಹಾಗೆಯೇ ಉಳಿದುಕೊಂಡಿತ್ತು. ಇದನ್ನು ರಕ್ಷಣಾ ಸಿಬ್ಬಂದಿ ಪತ್ತೆ ಮಾಡಿದ್ದಾರೆ.
ಭಗವದ್ಗೀತೆ ಪುಸ್ತಕ ಅಂಚು ಮಾತ್ರ ಅಲ್ಪ ಸ್ವಲ್ಪ ಸುಟ್ಟಿದೆ ಎಂದು ಬಿಟ್ಟರೆ ಉಳಿದಂತೆ ಏನೂ ಆಗಿರಲಿಲ್ಲ. ಯಾರೋ ಒಬ್ಬರು ಪ್ರಯಾಣಿಕರು ಭಗವದ್ಗೀತೆಯನ್ನು ಜೊತೆಗೆ ತೆಗೆದುಕೊಂಡು ಹೋಗಿದ್ದರು ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ.