ಬಿಜೆಪಿಗೆ ಅಜಿತ್ ಪವಾರ್ ಬೆಂಬಲ; ಶರದ್ ಪವಾರ್ ಹೇಳಿದ್ದೇನು?

ಶನಿವಾರ, 23 ನವೆಂಬರ್ 2019 (10:15 IST)
ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಬಿಜೆಪಿ ,ಎನ್ ಸಿಪಿ ಸೇರಿ ಸರ್ಕಾರ ರಚಿಸಿದ ಹಿನ್ನಲೆಯಲ್ಲಿ ಶಿವಸೇನೆ, ಕಾಂಗ್ರೆಸ್ ಗೆ  ಮಾತ್ರವಲ್ಲ ಎನ್ ಸಿಪಿಯ ಮುಖ್ಯಸ್ಥ ಶರದ್ ಪವಾರ್ ಗೂ ಶಾಕ್ ಆಗಿದೆ ಎನ್ನಲಾಗಿದೆ.




ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿಗೆ ಅಜಿತ್ ಪವಾರ್ ಬೆಂಬಲಿಸಿದ್ದು ಎನ್ ಸಿಪಿಯ ನಿರ್ಣಯವಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ನನಗೆ ಮಾಹಿತಿ ಇಲ್ಲದೇ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನನಗೆ ಗೊತ್ತಿಲ್ಲದೆ ಸರ್ಕಾರ ರಚಿಸಿದ್ದಾರೆ ಎಂದು ಹೇಳಿದ್ದಾರೆ.


ಅಲ್ಲದೇ ಎನ್ ಸಿಪಿಯ ಮುಖ್ಯಸ್ಥ ಶರದ್ ಪವಾರ್ ಈ ಬಗ್ಗೆ ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆಗೆ  ಕರೆ ಮಾಡಿ ಚರ್ಚೆ ನಡೆಸಿ ಅಜಿತ್ ಪವಾರ್ ನಮ್ಮ ಪಕ್ಷವನ್ನು ಇಬ್ಭಾಗ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ