ಲಕ್ನೋನಲ್ಲಿ ನಡೆಯುತ್ತಿರುವ ಪಕ್ಷದ ವರಿಷ್ಠರ ಸಭೆಯಲ್ಲಿ ಮಾತನ್ನಾಡುತ್ತಿದ್ದ ಅಖಿಲೇಶ್, ತಂದೆಯ ತಮ್ಮ ತಂದೆ ತಮ್ಮ ಮೇಲೆ ಕಿಡಿಕಾರಿದರೂ ಅವರ ವಿರುದ್ಧ ಮಾತನಾಡುವ ಧೈರ್ಯವನ್ನು ತೋರಿಲ್ಲ. ಆದರೆ ಮರಳಿ ಪಕ್ಷ ಸೇರಿರುವ ಅಮರ್ ಸಿಂಗ್ ವಿರುದ್ಧ ಆರೋಪಕ್ಕೆ ಇಳಿದಿದ್ದಾರೆ.
ನಾನು ತಂದೆಯ ಪರವಾಗಿಯೇ ಇರುತ್ತೇನೆ. 25 ವರ್ಷಗಳನ್ನು ಪೂರೈಸಿರುವ ಪಕ್ಷವನ್ನು ಒಡೆದು ಈಗ ಹೊಸ ಪಕ್ಷವನ್ನು ಏಕೆ ಕಟ್ಟಲಿ. ಹೊಸ ಪಕ್ಷವನ್ನು ಕಟ್ಟುವ ಯೋಚನೆಯನ್ನು ಮಾಡಿಯೇ ಇಲ್ಲ. ಪಕ್ಷದಲ್ಲಿ ಕೆಲವರು ಷಡ್ಯಂತ್ರ ಮಾಡಿದ್ದಾರೆ. ಮುಲಾಯಂ ಕೇಳಿದರೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಎಂದೋ ರಾಜೀನಾಮೆ ನೀಡುತ್ತಿದ್ದೆ. ಹೊಸ ಪಕ್ಷ ಕಟ್ಟುವುದು ವದಂತಿ. ಮುಲಾಯಂ ನನ್ನ ತಂದೆ ಅಷ್ಟೇ ಅಲ್ಲ ಗುರು ಸಹ ಭಾವುಕರಾಗಿ ಹೇಳಿದ್ದಾರೆ ಅಖಿಲೇಶ್.
ಪಕ್ಷದಲ್ಲಿ ನಡೆಯುತ್ತಿರುವ ಎಲ್ಲ ಭಿನ್ನಾಭಿಪ್ರಾಯ, ಗೊಂದಲಗಳಿಗೆ ಅಮರ್ ಸಿಂಗ್ ಅವರೇ ಕಾರಣ ಎಂದು ಕಿಡಿಕಾರಿದ ಅವರು, ನಾನು ಅಕ್ಟೋಬರ್ ತಿಂಗಳೊಳಗೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತೇನೆ ಎಂದು ಅಮರ್ ಸಿಂಗ್ ಈ ಮೊದಲೇ ಹೇಳಿದ್ದರು. ಬೇಕಾದರೆ ಅವರ ಟ್ವಿಟರ್ನ್ನು ಪರಿಶೀಲಿಸಿ ನೋಡಿ. ಅಮರ್ ಸಿಂಗ್ ಹೇಳಿಕೆ ನೋವುಂಟು ಮಾಡಿದೆ ಎಂದು ಸಿಂಗ್ ಮೇಲೆ ತಮ್ಮ ಅಸಮಧಾನವನ್ನು ಹೊರಹಾಕಿದ್ದಾರೆ.