ಅಖಿಲೇಶ್ ಪರ ಲಾಲು ಪ್ರಸಾದ್ ಪ್ರಚಾರ

ಗುರುವಾರ, 19 ಜನವರಿ 2017 (08:02 IST)
ಉತ್ತರ ಪ್ರದೇಶ ಚುನಾವಣೆಯಲ್ಲಿ ತಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಘೋಷಿಸಿರುವ 
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ತಾವು ಅಖಿಲೇಶ್ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ.

ಮಾಜಿ ಕೇಂದ್ರ ಸಚಿವ ರಘುನಾಥ್ ಝಾ ತಮ್ಮ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಉತ್ತರ ಪ್ರದೇಶದಲ್ಲಿ ಬಿಜೆಪಿಯ ಗೆಲುವನ್ನು ತಪ್ಪಿಸಲು ನಾವು ಸರ್ವ ರೀತಿಯಲ್ಲೂ ಪ್ರಯತ್ನಿಸುತ್ತೇವೆ ಎಂದರು.
 
ಉತ್ತರ ಪ್ರದೇಶದ ಚುನಾವಣೆ ಒಂದು ರಾಜ್ಯಕ್ಕೆ ಸೀಮಿತವಾದ ಚುನಾವಣೆಯಲ್ಲ. ಇದು ಸಂಪೂರ್ಣ ದೇಶದ ಚುನಾವಣೆ. ಈ ಬಾರಿ ಬಿಜೆಪಿಯನ್ನು ಸೋಲಿಸಿದರೆ 2019ರ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಸರಿ ಪಕ್ಷಕ್ಕೆ ಮಣ್ಣುಮುಕ್ಕಿಸುವುದು ಸುಲಭ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
 
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಶಕ್ತಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ತಾವು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ ಮಾತುಕತೆ ನಡೆಸುವುದಾಗಿ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ