ಕೇರಳ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ತಸ್ಲಿಮಾ, ಭಾರತದಲ್ಲಿರುವ ಜಾತ್ಯಾತೀತವಾದಿಗಳು ಕೇವಲ ಹಿಂದು ಮೂಲಭೂತವಾದಿಗಳನ್ನು ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ. ಆದರೆ, ಮುಸ್ಲಿಂ ಮೂಲಭೂತವಾದಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು.
ಭಾರತದಲ್ಲಿ ಪ್ರತಿಯೊಬ್ಬರು ಇತರೆ ಧರ್ಮಗಳನ್ನು ಗೌರವಿಸುತ್ತಾರೆ. ದೇಶದ ಕಾನೂನು ಅಸಹಿಷ್ಣುತೆಯನ್ನು ಬೆಂಬಲಿಸುವುದಿಲ್ಲ. ಆದರೆ, ಬಹಳಷ್ಟು ಜನ ಅಸಹಿಷ್ಣುತೆಯನ್ನು ಹೊಂದಿದ್ದಾರೆ ಎಂದು ಬಾಂಗ್ಲಾದೇಶ ಮೂಲದ ಖ್ಯಾತ ಸಾಹಿತಿ ತಸ್ಲಿಮಾ ನಸ್ರಿನ್ ಅಭಿಪ್ರಾಯಪಟ್ಟಿದ್ದಾರೆ.