ಆರುಷಿ ಕೊಲೆ ಪ್ರಕರಣ: ಇಂದು ಅಲಹಾಬಾದ್ ಹೈಕೋರ್ಟ್ ತೀರ್ಪು

ಗುರುವಾರ, 12 ಅಕ್ಟೋಬರ್ 2017 (10:21 IST)
ನವದೆಹಲಿ: 2008ರಲ್ಲಿ ನಡೆದಿದ್ದ ಆರುಷಿ ತಲ್ವಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ತೀರ್ಪು ನೀಡಲಿದೆ.

ಸದ್ಯ ಗಾಝಿಯಾಬಾದ್ ನಲ್ಲಿರುವ ಆರುಷಿ ಪೋಷಕರು ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಿಬಿಐ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಬಿ.ಕೆ.ನಾರಾಯಣ ಮತ್ತು ನ್ಯಾ. ಎ.ಕೆ.ಮಿಶ‍್ರಾ ಅವರನ್ನೊಳಗೊಂಡ ಹೈಕೋರ್ಟ್ ಪೀಠವು, ಸೆಪ್ಟೆಂಬರ್ ನಲ್ಲಿ ತೀರ್ಪನ್ನು ಕಾಯ್ದಿರಿಸಿತ್ತು.

2008ರ ಮೇ 16ರಂದು ಜಲ್ ವಾಯು ವಿಹಾರ್ ನಲ್ಲಿರುವ ಫ್ಲಾಟ್ ನಲ್ಲಿರುವ ತನ್ನ ಬೆಡ್ ರೂಮಿನಲ್ಲಿ ಕೊಲೆಯಾಗಿದ್ದಳು. ಈಕೆಯ ಗಂಟಲನ್ನು ಶಸ್ತ್ರಚಿಕಿತ್ಸೆಗೆ ಬಳಸುವ ಬ್ಲೇಡ್ ನಲ್ಲಿ ಕೊಯ್ದು ಹತ್ಯೆ ಮಾಡಲಾಗಿತ್ತು. ಮೊದಲಿಗೆ ಮನೆ ಕೆಲಸದವನಾಗಿದ್ದ ಹೇಮರಾಜ್, ಆರುಷಿ ಹತ್ಯೆ ಮಾಡಿದ್ದಾನೆ ಎನ್ನಲಾಗಿತ್ತು. ಆದರೆ ಅದೇ ಮನೆಯ ಟೆರೆಸ್ ನಲ್ಲಿ 2 ದಿನದ ಬಳಿಕ ಹೇಮರಾಜ್ ಶವಪತ್ತೆಯಾದ ಬಳಿಕ ಆರುಷಿ ಕೊಲೆ ಪ್ರಕರಣ ತಿರುವು ಪಡೆದುಕೊಂಡಿತ್ತು. ಇದಾದ ಬಳಿಕ ತೀವ್ರ ವಿಚಾರಣೆ ನಡೆಸಿದಾಗ ತಲ್ವಾರ್ ದಂಪತಿಯೇ ಇಬ್ಬರನ್ನು ಹತ್ಯೆ ಮಾಡಿರುವುದಾಗಿ ಶಂಕೆ ವ್ಯಕ್ತಪಡಿಸಿ ವಿಚಾರಣೆ ನಡೆಸಿದ್ದರು.

ತೀವ್ರ ವಿಚಾರಣೆಯ ಬಳಿಕ ಪ್ರಕರಣದಲ್ಲಿ ಆರುಷಿ ಪೋಷಕರಾದ ರಾಜೇಶ್ ತಲ್ವಾರ್ ಮತ್ತು ನೂಪುರ್ ದಂಪತಿ ಜೋಡಿ ಕೊಲೆ ಮಾಡಿದ್ದಾರೆಂದು 2013ರಲ್ಲಿ ಉತ್ತರ ಪ್ರದೇಶ ಕೋರ್ಟ್ ತಲ್ವಾರ್ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ