ತಮಿಳುನಾಡಿಗೆ ನೀರು ಬಿಡದಂತೆ ಸಿಎಂಗೆ ಅಂಬರೀಶ್ ಪತ್ರ

ಮಂಗಳವಾರ, 16 ಜನವರಿ 2018 (09:33 IST)

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಮಾಜಿ ಸಚಿವ ಹಾಗೂ ಶಾಸಕ ಅಂಬರೀಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರಿಗೆ ಮತ್ತು ಕಾವೇರಿ ಕೊಳ್ಳದಲ್ಲಿರುವ ಪ್ರದೇಶಗಳ ಜನರಿಗೆ ಕುಡಿಯಲು, ಜಾನುವಾರುಗಳಿಗೆ ಹಾಗೂ ಬೆಳೆದು ನಿಂತಿರುವ ಬೆಳೆಗಳಿಗೆ ನೀಡುವುದೂ ಕಷ್ಟವಿದ್ದು ತಮಿಳುನಾಡಿಗೆ ನೀರು ಬಿಡಬಾರದು ಎಂದು ಒತ್ತಾಯಿಸಿದ್ದಾರೆ.

ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಿದ್ದು, ತಮಿಳುನಾಡಿಗೆ ನೀರು ಬಿಟ್ಟರೆ ರಾಜ್ಯದಲ್ಲಿ ಹಾಹಾಕಾರವಾಗುತ್ತದೆ. ಹೀಗಾಗಿ, ತಮಿಳುನಾಡಿ ಮುಖ್ಯಮಂತ್ರಿ ಪಳನಿಸ್ವಾಮಿ ಬರೆದಿರುವ ಪತ್ರಕ್ಕೆ ಸ್ಪಂದಿಸಬಾರದು ಎಂದಿದ್ದಾರೆ.

ರಾಜ್ಯದ ಹಿತ ಕಾಪಾಡಲು ಅಗತ್ಯಬಿದ್ದರೆ ಸರ್ವಪಕ್ಷ ಸಭೆ ಕರೆದು ಚರ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ